ಸವಣೂರು ಪ್ರಾ.ಕೃ.ಸ. ಸಂಘಕ್ಕೆ ಸತತ 13ನೇ ಬಾರಿಗೆ ಡಿಸಿಸಿ ಬ್ಯಾಂಕ್ ಪ್ರಶಸ್ತಿ

0

ಪುತ್ತೂರು: ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಾಧನೆಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸತತ 13ನೇ ಬಾರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ , ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಚಂದ್ರಶೇಖರ್ ಪಿ. ಪ್ರಶಸ್ತಿ ಸ್ವೀಕರಿಸಿದರು. ನಿರ್ದೇಶಕರಾದ ಉದಯ ರೈ ಮಾದೋಡಿ, ಪ್ರಕಾಶ್ ರೈ ಸಾರಕರೆ, ಶಿವಪ್ರಸಾದ್ ಎಂ.ಎಸ್ ಉಪಸ್ಥಿತರಿದ್ದರು.

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ.ಎಂ‌.ಎನ್ ರಾಜೇಂದ್ರ ಕುಮಾರ್, ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ ಹಾಗೂ ನಿರ್ದೇಶಕರುಗಳಾದ ಶಶಿಕುಮಾರ್ ರೈ ಬಾಲ್ಯೊಟ್ಟು ಪ್ರಶಸ್ತಿ ಪ್ರದಾನ ಮಾಡಿದರು. ಎಸ್ ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಬಿ.ಜಯರಾಮ ರೈ,ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here