ವಿದ್ಯಾಭಾರತಿ ಜಿಲ್ಲಾಮಟ್ಟದ ವಾಲಿಬಾಲ್‌ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

0

ಪುತ್ತೂರು:ಶ್ರೀ ರಾಮಕುಂಜೇಶ್ವರ ಹೈಸ್ಕೂಲ್‌, ರಾಮಕುಂಜ ಇದರ ಸಹಯೋಗದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಭಾಗವಹಿಸಿ ದ್ವಿತೀಯ ಸ್ಥಾನ  ಸ್ಥಾನ ಪಡೆದಿದೆ. ತಂಡದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಾದ ನಿಶಾ ಎ.ಎಸ್‌, ಸಿಂಚನಾ ಎಚ್.‌ಡಿ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಾದ ಎ.ಎಸ್‌ ಪ್ರಜ್ಞಾ, ವರ್ಣಿಕಾ ಗೌಡ ಬಿ.ಪಿ, ಬಿಂದು ಎಚ್.‌ ಆರ್‌, ರಿಷಿಕಾ ಡಿ.ಆರ್‌ ಮತ್ತು ಸಹನಾ ಎಚ್‌. ಆರ್‌, ರಮ್ಯ ಇವರು ಭಾಗಿಯಾಗಿದ್ದರು.

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್‌, ಡಾ. ಜ್ಯೋತಿ ಮತ್ತು ಯತೀಶ್‌ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತದೆ. ಇವರನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು  ಉಪಪ್ರಾಂಶುಪಾಲರು ಹಾಗೂ ಉಪನ್ಯಾಸಕ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here