ಕಾಮಜಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು: ಮಾಣಿಲ ಗ್ರಾಮದ ಕಾಮಜಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ನಿವೃತ್ತ ಯೋಧರಾದ ಅನಂತರಾಮ ಭಟ್ ಇವರು ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯ ದಿನಾಚರಣೆಯ ಕುರಿತು ಮಾತನಾಡಿದರು. ಧ್ವಜಾರೋಹಣದ ನಂತರ ಶಾಲಾ ವಿದ್ಯಾರ್ಥಿಗಳಿಂದ ಮೆರವಣಿಗೆ, ಬಳಿಕ ಸಭಾ ಕಾರ್ಯಕ್ರಮ, ಸಭಾ ಕಾರ್ಯಕ್ರಮ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಾಣಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಧರ್ ಬಾಳೆಕಲ್ಲು ,ಗ್ರಾಮ ಪಂಚಾಯತಿ ಸದಸ್ಯೆ ವನಿತಾ, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಸುಂದರ ಕುಲಾಲ್ ಪಿ ,ಶಾಲಾ ಎಸ್‌ ಡಿ ಎಂಸಿ ಉಪಾಧ್ಯಕ್ಷ ಮೋಹನ್ ಕುಲಾಲ್ ಶ್ರೀ ಕ್ಷೇತ್ರ ಕುಕ್ಕಾಜೆ ಇಲ್ಲಿನ ಆಡಳಿತ ಮೊಕ್ತೇಸರರಾದ ಎಂಕೆ ಕುಕ್ಕಾಜೆ, ದಾನಿಗಳಾದ ರಘುರಾಮ ನಾಯಕ್, ಕಕ್ವೆ ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ವಿಕ್ರಂ ಮುರುವ, ಹಾಗೂ ಶಾಲಾ ಎಸ್‌ಡಿಎಂಸಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು. ಶಾಲಾ ಪ್ರಭಾರ ಮುಖ್ಯಗುರು ಸುಧಾಕುಮಾರಿ ಕೆ ಸ್ವಾಗತಿಸಿದರು. ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕಿ ಸರಿತಾ ನಾಯ್ಕ ಇವರು ಸ್ವಾತಂತ್ರ್ಯ ದಿನಾಚರಣೆಯ ಕುರಿತು ಮಾತನಾಡಿದರು. ಅತಿಥಿ ಶಿಕ್ಷಕಿ ಮಾಲತಿ ಎನ್ ವಂದಿಸಿದರು. ಶಿಕ್ಷಕಿ ಚೈತ್ರಾ ಹಾಗೂ ಕುಮಾರಿ ಸುಶ್ಮಿತಾ ರವರು ಸಹಕರಿಸಿದರು. ಜ್ಞಾನದೀಪ ಶಿಕ್ಷಕಿ ಮಾಲತಿ ಡಿ ಯವರು ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here