ವಿಟ್ಲ; ವಿಟ್ಲ ಪಡ್ನೂರು ವ್ಯವಸಾಯ ಸೇವಾ ಸಹಕಾರಿ ಸಂಘವು 2023-24ರ ಆರ್ಥಿಕ ವರ್ಷದಲ್ಲಿ ಮಾಡಿದ ಸಾಧನೆಗಾಗಿ ಸತತ ಐದನೇ ಭಾರಿ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನಿಂದ ಪ್ರಶಸ್ತಿ ಲಭಿಸಿದೆ.
ಮಂಗಳೂರಿನಲ್ಲಿ ನಡೆದ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷರಾದ ಸಹಕಾರಿ ರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್ ರವರು ವಿಟ್ಲ ಪಡ್ನೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಕುಳಾಲು, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಧ್ಯಾ ಯು. ಶೆಟ್ಟಿ, ಕಾಂತು ಮೂಲೆ ರವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ನಿರ್ದೇಶಕರಾದ ಟಿ.ಜಿ. ರಾಜಾರಾಮ್ ಭಟ್, ಶಶಿಕುಮಾರ್ ರೈ ಬಾಲೊಟ್ಟು, ಎಸ್.ಬಿ. ಜಯರಾಮ ರೈ, ಮೊದಲಾದವರು ಉಪಸ್ಥಿತರಿದ್ದರು.