ಪಡೀಲ್ ಚೈತನ್ಯ ಮಿತ್ರ ವ್ರಂದದಿಂದ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು:ಪಡೀಲ್ ಚೈತನ್ಯ ಮಿತ್ರ ವ್ರಂದದಿಂದ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಪಡೀಲ್ ಚೈತನ್ಯ ಮಿತ್ರ ವೃಂದ ಇದರ ವತಿಯಿಂದ ಸಂಸ್ಥೆಯ ಕಛೇರಿಯಲ್ಲಿ ಸುದ್ದಿ ಬಿಡುಗಡೆ ಪತ್ರಿಕೆಯ ಹಿರಿಯ ವರದಿಗಾರ ಶೇಖ್ ಜೈನುದ್ದೀನ್ ರವರು ಧ್ವಜಾರೋಹಣ ನೆರವೇರಿಸಿದರು. ವಿಶ್ರಾಂತ ಉಪನ್ಯಾಸಕ ಮೇಜರ್ ಎಮ್ ಎನ್ ಚೆಟ್ಟಿಯಾರ್ ಹಾಗೂ ನಿವೃತ್ತ ಅರಣ್ಯಾಧಿಕಾರಿ ಬಾಲಕೃಷ್ಣ ಶೆಟ್ಟಿ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಂಸ್ಥೆಯ ಸಂಚಾಲಕ ಸಂಪತ್ ಕುಮಾರ್ ಜೈನ್ ರವರು ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ಸಂಸ್ಥೆಯ ಅಧ್ಯಕ್ಷ ಆನಂದ್ ಅಧ್ಯಕ್ಷತೆ ವಹಿಸಿದ್ದರು.


ಇದೇ ಸಂದರ್ಭದಲ್ಲಿ ಪ್ಯಾರಿಸ್ ಒಲಿಂಪಿಕ್ಸ್ ಸ್ಪರ್ಧೆಗಳಲ್ಲಿ ಪದಕ ವಿಜೇತ ರಾದ ಭಾರತೀಯ ಕ್ರೀಡಾಪಟುಗಳಿಗೆ ಹಾಗೂ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಕ್ರೀಡಾಪಟುಗಳಿಗೆ, ತರಬೇತುದಾರರಿಗೆ, ಚಪ್ಪಾಳೆ ಮೂಲಕ ಅಭಿನಂದನೆ ಸಲ್ಲಿಸಲಾಯಿತು.


ಸಂಸ್ಥೆಯ ಮಾಜಿ ಅಧ್ಯಕ್ಷ ಚಂದ್ರಶೇಖರ್ ಕೇಪುಳು ಸ್ವಾಗತಿಸಿ, ಕಾರ್ಯದರ್ಶಿ ಗಣೇಶ್ ಕುಮಾರ್ ವಂದಿಸಿದರು. ಸ್ಥಾಪಕಾಧ್ಯಕ್ಷ ಪುರಂದರ್ ಪಡೀಲ್ ಕಾರ್ಯಕ್ರಮ ನಿರೂಪಿಸಿದರು. ರಮೇಶ್ ಬಿ, ಮಂಜುನಾಥ್ ಎಮ್, ಅಶೋಕ್ ಟಿ, ಗಣೇಶ್ ಬಿ, ಸುರೇಶ್ ರಾಜ್ ರವರು ಅತಿಥಿ ಗಳಿಗೆ ಹೂ ನೀಡಿ ಗೌರವಿಸಿದರು. ಸದಸ್ಯರುಗಳಾದ ಗಣೇಶ್ ಎನ್, ಸುಂದರ ಎಚ್, ಶಿವರಾಮ ಗೌಡ , ರವೀಂದ್ರ ಪೈ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here