ಬೆಟ್ಟಂಪಾಡಿ ನವೋದಯ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಬೆಟ್ಟಂಪಾಡಿ: ಇಲ್ಲಿನ ನವೋದಯ ಪ್ರೌಢಶಾಲೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವದ ಅಧ್ಯಕ್ಷತೆಯನ್ನು ನವೋದಯ ವಿದ್ಯಾ ಸಮಿತಿಯ ಅಧ್ಯಕ್ಷ ಡಿ ಎಂ ಬಾಲಕೃಷ್ಣ ಭಟ್ ಘಾಟೆ ವಹಿಸಿದರು.
ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಗಣೇಶ್ ರೈ ಧ್ವಜಾರೋಹಣಗೈದರು.


ಶಾಲಾ ಸಂಚಾಲಕ ಡಾ. ಶ್ರೀಕೃಷ್ಣ ಭಟ್ ಶುಭ ಹಾರೈಸಿದರು. ಮುಖ್ಯಗುರು ಪುಷ್ಪಾವತಿ ಎಸ್. ಸ್ವಾಗತಿಸಿದರು. ಶಿಕ್ಷಕ ರಾಧಾಕೃಷ್ಣ ಕೋಡಿ ನಿರೂಪಿಸಿದರು. ಶಿಕ್ಷಕಿ ಸುಮಂಗಲ ಕೆ. ಭಾಷಣ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆಗಳನ್ನು ನಡೆಸಿದರು. ವಿಜ್ಞಾನ ಶಿಕ್ಷಕಿ ಭುವನೇಶ್ವರಿ.ಎಂ. ವಂದಿಸಿದರು. ಸಂಸ್ಕೃತ ಶಿಕ್ಷಕಿ ಶೋಭಾ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಸಹಕರಿಸಿದರು. ಶಿಕ್ಷಕ -ರಕ್ಷಕ ಸಂಘದ ಉಪಾಧ್ಯಕ್ಷ ರಾಮಪ್ರಸಾದ್ ಉಪಸ್ಥಿತರಿದ್ದರು. ಸಿಹಿತಿಂಡಿಯನ್ನು ವಿತರಿಸಿ ಸಂಭ್ರಮದಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

LEAVE A REPLY

Please enter your comment!
Please enter your name here