ಸರ್ವೆ ಶ್ರೀ ಗೌರಿ ಮಹಿಳಾ ಮಂಡಲದ ವತಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ

0

ಪುತ್ತೂರು: ಸರ್ವೆ ಶ್ರೀಗೌರಿ ಮಹಿಳಾ ಮಂಡಲದ ವತಿಯಿಂದ ಕಲ್ಲಮ ಶ್ರೀರಾಘವೇಂದ್ರ ಮಠದಲ್ಲಿ ಶ್ರದ್ದಾ ಭಕ್ತಿಯಿಂದ ತೃತೀಯ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯನ್ನು ಮಠದ ಪ್ರಧಾನ ಅರ್ಚಕರಾದ ಸುಧೀಂದ್ರ ಅಡಿಗ ಅವರ ಪೌರೋಹಿತ್ಯದ ಮೂಲಕ ನೆರವೇರಿಸಲಾಯಿತು.

ರಾಘವೇಂದ್ರ ಮಠದ ಆಡಳಿತ ಮಂಡಳಿಯ ವ್ಯವಸ್ಥಾಪಕ ಡಾ.ಸೀತಾರಾಮ ಭಟ್ ಕಲ್ಲಮ್ಮ ಮತ್ತು ಅನುರಾಧ ಭಟ್ ಕಲ್ಲಮ್ಮ ದಂಪತಿಗಳು ಹಾಜರಿದ್ದು, ಕಾರ್ಯಕ್ರಮ ಯಶಸ್ವಿಯಾಗಲು ಕಾರಣೀಭೂತರಾದರು. ಸುಮಾರು 350 ಕ್ಕಿಂತಲೂ ಹೆಚ್ಚು ಹೆಂಗಳೆಯರು ಶ್ರೀ ವರಮಹಾಲಕ್ಷ್ಮಿ ಪೂಜೆಯನ್ನು ಮಾಡಿಸಿದರು. ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಮುಖ್ಯಗುರು ವಿನಯ ವಿ ಶೆಟ್ಟಿ ವರಮಹಾಲಕ್ಷ್ಮಿ ಪೂಜೆಯ ಮಹತ್ವದ ಬಗ್ಗೆ ಧಾರ್ಮಿಕ ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಯಲ್ಲಿ ವಿಶೇಷ ಸಾಧನೆ ಮಾಡಿದ ಮಹಿಳಾ ಮಂಡಲದ ಸದಸ್ಯರ ಮಕ್ಕಳನ್ನು ಅಭಿನಂದಿಸಲಾಯಿತು. ಶ್ರೀ ಕೃಷ್ಣಾರ್ಪಿತ ಮಹಿಳಾ ಭಜನಾ ಮಂಡಳಿ ಕುಮಾರಮಂಗಳ ಪುಣ್ಚಪ್ಪಾಡಿ ಇವರಿಂದ ಭಜನಾ ಸೇವೆ ನಡೆಯಿತು.

ಈ ಸಂದರ್ಭದಲ್ಲಿ ಸರ್ವೆ- ಮುಂಡೂರು ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ್ ಎನ್ ಎಸ್ ಡಿ, ಗ್ರಾಮ ಪಂಚಾಯತ್ ಸದಸ್ಯ ಕಮಲೇಶ್ ಎಸ್ ಡಿ, ಶ್ರೀಗೌರಿ ಮಹಿಳಾ ಮಂಡಲದ ಗೌರವಾಧ್ಯಕ್ಷರು, ಗೌರವ ಸಲಹೆಗಾರರು ,ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು, ಶ್ರೀಷಣ್ಮುಖ ಯುವಕ ಮಂಡಲ ಸರ್ವೆಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here