ಚೆಸ್ ಪಂದ್ಯಾಟದಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಕಾಣಿಯೂರು : ಪುತ್ತೂರು ತಾಲೂಕು ಮಟ್ಟದ ಚೆಸ್ ಪಂದ್ಯಾಟವು ಆ.14 ರಂದು ದ. ಕ.ಜಿ. ಪ. ಹಿರಿಯ ಪ್ರಾಥಮಿಕ ಶಾಲೆ, ಹೊಸಮಜಲುನಲ್ಲಿ ನಡೆಯಿತು. 8ನೇ ತರಗತಿಯ ಬಾಲಕಿಯರ ವಿಭಾಗದಲ್ಲಿ ಸಾನ್ವಿಕ ಎಚ್ ಪ್ರಥಮ ಸ್ಥಾನ ಮತ್ತು ಪ್ರಾಥಮಿಕ ಬಾಲಕರ ವಿಭಾಗದಲ್ಲಿ ಮಹಮ್ಮದ್ ನೂಮಾನ್ (6ನೇ ) ನಾಲ್ಕನೇ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಶಾಲಾ ಟ್ರಸ್ಟಿ ಹರಿಚರಣ್ ರೈ ಮಾದೋಡಿಯವರು ತರಬೇತು ನೀಡಿರುತ್ತಾರೆ. ದೈಹಿಕ ಶಿಕ್ಷಣ ಶಿಕ್ಷಕರು ಸಹಕರಿಸಿರುತ್ತಾರೆ.
ವಿಜೇತರನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಜಗನ್ನಾಥ ರೈ ನುಳಿಯಾಲು, ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ, ಶಾಲಾ ಆಡಳಿತ ಅಧಿಕಾರಿ ವಸಂತ ರೈ ಕಾರ್ಕಳ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ದಿವೀಶ್ ಮುರುಳ್ಯ, ಮುಖ್ಯಗುರುಗಳು ಮತ್ತು ಎಲ್ಲಾ ಶಿಕ್ಷಕವೃಂದದವರು ಅಭಿನಂದಿಸಿದರು.

LEAVE A REPLY

Please enter your comment!
Please enter your name here