ಗ್ಯಾರಂಟಿ ಅನುಷ್ಠಾನ ಸಮಿತಿ – ಕಡಬ ತಾ| ಸಮಿತಿ ಸದಸ್ಯರಾಗಿ ಉಷಾ ಅಂಚನ್, ಗಂಗಾಧರ ಶೆಟ್ಟಿ ನೇಮಕ

0

ನೆಲ್ಯಾಡಿ: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ರಾಜ್ಯ ಸರಕಾರ ತಾಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನಾ ಸಮಿತಿ ರಚಿಸಲಾಗಿದೆ. ಕಡಬ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾಗಿ ತಾ.ಪಂ. ಮಾಜಿ ಸದಸ್ಯೆ ಉಷಾ ಅಂಚನ್ ನೆಲ್ಯಾಡಿ ಹಾಗೂ ನೆಲ್ಯಾಡಿ ಗ್ರಾ.ಪಂ.ಮಾಜಿ ಅಧ್ಯಕ್ಷ ಗಂಗಾಧರ ಶೆಟ್ಟಿ ಹೊಸಮನೆ ನೇಮಕಗೊಂಡಿದ್ದಾರೆ.
ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್‌ಕುಮಾರ್ ಶೆಟ್ಟಿಯವರನ್ನು ಕಡಬ ತಾಲೂಕು ಸಮಿತಿ ಅಧ್ಯಕ್ಷರನ್ನಾಗಿ ಹಾಗೂ 14 ಮಂದಿ ಸದಸ್ಯರನ್ನು ನೇಮಕಗೊಳಿಸಲಾಗಿದೆ. ಗ್ಯಾರಂಟಿ ಅನುಷ್ಠಾನ ಸಮಿತಿಯ ಮೂಲಕ ಜನರ ಕುಂದು ಕೊರತೆಗಳನ್ನು ನಿವಾರಿಸಲು ಸರಕಾರದ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ತೊಂದರೆಯಾಗದ ರೀತಿಯಲ್ಲಿ ಅರ್ಹ ಪಲಾನುಭವಿಗಳಿಗೆ ದೊರಕಬೇಕೆನ್ನುವ ಉದ್ದೇಶದೊಂದಿಗೆ ಈ ಸಮಿತಿಯನ್ನು ರಚಿಸಲಾಗಿದೆ.

LEAVE A REPLY

Please enter your comment!
Please enter your name here