ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಅಂಬಿಕಾದ ವಿದ್ಯಾರ್ಥಿಗಳ ಸಾಧನೆ

0

ಪುತ್ತೂರು: ವಿದ್ಯಾಭಾರತಿ ಹಾಗೂ ಉಪ್ಪಿನಂಗಡಿಯ ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜುಗಳ ಸಹಯೋಗದಲ್ಲಿ ನಡೆದ ಜಿಲ್ಲಾಮಟ್ಟದ 45 ಕೆ ಜಿ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ದ್ವಿತೀಯ ಪಿ ಯು ವಿದ್ಯಾರ್ಥಿ ವಂಶಿಕ್ ರೈ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ಗೆದ್ದುಕೊಂಡಿರುತ್ತಾರೆ. ಇವರು ಪುತ್ತೂರಿನ ಶಶಿಧರ ರೈ ಮತ್ತು ರವಿಕಲಾ ರೈ ದಂಪತಿ ಪುತ. ನರಿಮೊಗರಿನ ಉಮೇಶ್ ರೈ ಮತ್ತು ಮಲ್ಲಿಕಾ ಲತಾ ಜಿ ದಂಪತಿ ಪುತ್ರ, ದ್ವಿತೀಯ ಪಿಯು ವಿದ್ಯಾರ್ಥಿ ನಿಶಾಂತ್ ರೈ 50 ಕೆ ಜಿ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಕಂಚಿನ ಪದಕ ಗೆದ್ದು ಕೊಂಡಿದ್ದಾರೆ. ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾಸಂಸ್ಥೆಯಲ್ಲಿ ಈ ಸ್ಪರ್ಧೆಗಳು ನಡೆದವು.

LEAVE A REPLY

Please enter your comment!
Please enter your name here