ಶ್ರೀ ರಾಮಕುಂಜೇಶ್ವರ ವಿದ್ಯಾಲಯದಲ್ಲಿ ರಕ್ಷಾ ಬಂಧನ ಆಚರಣೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ವಿದ್ಯಾಲಯದಲ್ಲಿ ಆ.19ರಂದು ರಕ್ಷಾ ಬಂಧನ ಕಾರ್ಯಕ್ರಮ ನಡೆಯಿತು.


ಶಾಲಾ ಕಾರ್ಯದರ್ಶಿ ಸೇಸಪ್ಪ ರೈ ಅವರು ರಕ್ಷಾ ಬಂಧನ ಮಹತ್ವ ಮತ್ತು ಕಾರ್ಯಗಳ ಬಗ್ಗೆ ತಿಳಿಸಿ ಶುಭಕೋರಿದರು. ಶಾಲಾ ಸಿಬ್ಬಂದಿ ಚರಣ್ ಅವರು ರಕ್ಷಾ ಬಂಧನದ ಸಂದೇಶವನ್ನು ತಿಳಿಸಿದರು. ನಂತರ ಮಕ್ಕಳೆಲ್ಲಾ ಪರಸ್ಪರ ರಕ್ಷೆಯನ್ನು ಕಟ್ಟಿ ಶುಭಕೋರಿದರು. ಶಾಲಾ ಸಂಚಾಲಕ ಶಿವಪ್ರಸಾದ್ ಆಚಾರ್ಯ, ಪ್ರಾಂಶುಪಾಲ ಪ್ರವಿದ್ ಪಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಿತಶ್ರೀ ಕಾರ್ಯಕ್ರಮ ನಿರೂಪಿಸಿದರು. ನಿಶಿತಾ ಸ್ವಾಗತಿಸಿದರು. ಪಾರ್ವತಿ ವಂದಿಸಿದರು. ಶಿಕ್ಷಕರು ಮತ್ತು ಸಿಬ್ಬಂದಿಗಳು ಸಹಕರಿಸಿದರು. ಶಾಲಾ ಸಂಚಾಲಕರ ವತಿಯಿಂದ ಸಿಹಿ ತಿಂಡಿ ವಿತರಿಸಲಾಯಿತು.

LEAVE A REPLY

Please enter your comment!
Please enter your name here