ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ರಕ್ಷಾಬಂಧನ

0

ಪುತ್ತೂರು: ಬನ್ನೂರಿನ ಕೃಷ್ಣನಗರದ ಎವಿಜಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಆ.19 ರಂದು ರಕ್ಷಾ ಬಂಧನ ದಿನಾಚರಣೆಯನ್ನು ಆಚರಿಸಲಾಯಿತು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ  ಸತೀಶ್ ರಾವ್ ಪಿ ರವರು ದೀಪ ಬೆಳಗಿಸಿ ರಕ್ಷಾಬಂಧನದ ಉದ್ಘಾಟನೆಯನ್ನು ಮಾಡಿ ಸಹೋದರತ್ವದ ಸಂಬಂಧದ ಬಗ್ಗೆ ತಿಳಿಸಿದರು. ಕಾರ್ಯಕ್ರಮದ ಅತಿಥಿಯಾಗಿ ಶಾಲಾ ಉಪಾಧ್ಯಕ್ಷ ಉಮೇಶ್  ಗೌಡ ಮಳುವೇಲು ರಕ್ಷಾಬಂಧನದ ಮಹತ್ವದ ಬಗ್ಗೆ ಮಾತನಾಡಿದರು.

ವೇದಿಕೆಯಲ್ಲಿ ಶಾಲಾ  ಸಂಚಾಲಕ ಎ.ವಿ. ನಾರಾಯಣ ಹಾಗೂ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಸೌಮ್ಯಶ್ರೀ ಹೆಗಡೆ  ಸಂದರ್ಭೋಚಿತವಾಗಿ ರಕ್ಷಾಬಂಧನದ ಬಗ್ಗೆ ಮಾತನಾಡಿದರು.ಕಾರ್ಯಕ್ರಮ ದ ಅಧ್ಯಕ್ಷತೆಯನ್ನು ಆಡಳಿತ ಮಂಡಳಿಯ ಅಧ್ಯಕ್ಷ  ವೆಂಕಟರಮಣ ಗೌಡ ವಹಿಸಿದ್ದು ರಕ್ಷಾಬಂಧನದ ಮಹತ್ವದ ಬಗ್ಗೆ ತಿಳಿಸಿದರು. 

ಕಾರ್ಯಕ್ರಮದಲ್ಲಿ  ಬೋಧಕ ಹಾಗೂ ಬೋಧಕೇತರ ವೃಂದ, ಪೋಷಕವೃಂದ ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಶಾಲಾ ಪ್ರಾಂಶುಪಾಲೆ ಸವಿತಾ ಕೆ ಯವರು ಸ್ವಾಗತಿಸಿ ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.  ಚಂದ್ರಿಕಾ ರವರು ವಂದಿಸಿದರು. ರಂಜಿತಾ ರೈ ಮತ್ತು ರೀಮಾ ಲೋಬೋ ರವರು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here