ಶ್ರೀರಾಮಕುಂಜೇಶ್ವರ ಪದವಿಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯಲ್ಲಿ ಸದ್ಭಾವನಾ ದಿನಾಚರಣೆ

0

ಪುತ್ತೂರು: ಶ್ರೀರಾಮಕುಂಜೇಶ್ವರ ಪದವಿಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯಲ್ಲಿ ಸದ್ಭಾವನಾ ದಿನಾಚರಣೆಯು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಇವರ ಉಪಸ್ಥಿತಿಯಲ್ಲಿ ನಡೆಯಿತು.

ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಶಾಸಕರು,” ನಾವೆಲ್ಲರೂ ಜಾತಿ, ಮತ, ಧರ್ಮ ಹಾಗು ಭಾಷೆಗಳ ವ್ಯತ್ಯಾಸಗಳನ್ನು ದೊಡ್ಡದು ಮಾಡದೆ, ಸೌಹಾರ್ದತೆಯಿಂದ ಬಾಳುತ್ತಾ,ರಾಷ್ಟ್ರ ಹಿತದ ಏಕಭಾವವನ್ನು ಹೊಂದಬೇಕು. ಯಾವುದೇ ಕಾರಣಕ್ಕೂ ಹಿಂಸೆಯ ಮಾರ್ಗವನ್ನು ಅನುಸರಿಸದೇ, ಶಾಂತಿಯ ಮಾರ್ಗವನ್ನು ಪಾಲಿಸಬೇಕು” ಎಂದರು.

ಪ್ರಾಂಶುಪಾಲ ಚಂದ್ರಶೇಖರ್ ಕೆ ಸದ್ಭಾವನಾ ದಿನಾಚರಣೆಯ ಪ್ರತಿಜ್ಞೆ ಬೋಧಿಸಿದರು. ವೇದಿಕೆಯಲ್ಲಿದ್ದ ಗಣ್ಯರು ಮತ್ತು ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳು ಪ್ರಮಾಣವಚನ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಟ್ರಸ್ಟ್ ಇದರ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯ್ಸ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ಇದರ ಅಧ್ಯಕ್ಷ ಮಹೇಶ್ ಕೆ ಸವಣೂರು, ಮುಖ್ಯ ಶಿಕ್ಷಕ ಸತೀಶ್ ಭಟ್, ಕಾಲೇಜು ಆಡಳಿತ ಮಂಡಳಿಯ ಸದಸ್ಯ ಲಕ್ಷ್ಮೀನಾರಾಯಣ ರಾವ್ ಆತೂರು ಮತ್ತು ಇತರರು ಉಪಸ್ಥಿತಿದ್ದರು.

LEAVE A REPLY

Please enter your comment!
Please enter your name here