ಪುತ್ತೂರು ಮೊಸರು ಕುಡಿಕೆ ಉತ್ಸವದ ಪ್ರಚಾರರ್ಥ-ಪುಣ್ಚತ್ತಾರಿನಲ್ಲಿ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಂಟಿಸುವ ಮೂಲಕ ಅಭಿಯಾನ

0

ಕಾಣಿಯೂರು: ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನದ ಅಂಗವಾಗಿ ವಿಶ್ವ ಹಿಂದೂ ಪರಿಷದ್ ಮತ್ತು ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಯ ನೇತೃತ್ವದಲ್ಲಿ ಆ 31ರಂದು ನಡೆಯಲಿರುವ 14ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಪ್ರಚಾರರ್ಥ ಪುಣ್ಚತ್ತಾರಿನಲ್ಲಿ ಶ್ರಿಹರಿ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಂಟಿಸುವ ಮೂಲಕ ಅಭಿಯಾನ ನಡೆಯಿತು.

ಪುಣ್ಚತ್ತಾರು ಶ್ರೀ ಹರಿ ಆಟೋ ರಿಕ್ಷಾ ಚಾಲಕ ಮಾಲಕ ಸಂಘದ ಅಧ್ಯಕ್ಷ ಜನಾರ್ದನ ದೋಳ್ಪಾಡಿಯವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here