ಕಟ್ಟತ್ತಿಲ: ಬಸ್ಸು-ದ್ವಿಚಕ್ರ ವಾಹನದ ಮಧ್ಯೆ ಅಪಘಾತ-ಚಿಕಿತ್ಸೆಯಲ್ಲಿದ್ದ ದ್ವಿಚಕ್ರ ವಾಹನ ಸವಾರ ಮೃತ್ಯು

0

ವಿಟ್ಲ: ಖಾಸಗಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟ ಘಟನೆ ಆ.21ರಂದು ನಡೆದಿದೆ.


ಕಟ್ಟತ್ತಿಲ ನಿವಾಸಿ ಮುಝಂಬಿಲ್ ಮೃತ ದುರ್ದೈವಿ. ಘಟನೆ ಆ.12ರಂದು ಸಾಲೆತ್ತೂರು – ಬಾಕ್ರಬೈಲ್ ರಸ್ತೆಯ ಸಾಲೆತ್ತೂರು ಗ್ರಾಮದ ಕಟ್ಟತ್ತಿಲ ಎಂಬಲ್ಲಿ ನಡೆದಿತ್ತು. ವಿಟ್ಲ ಕಡೆಯಿಂದ ಮಂಗಳೂರು ಕಡೆ ತೆರಳುತ್ತಿದ್ದ ಖಾಸಗಿ ಬಸ್ಸು ಹಾಗೂ ಮೆದು ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ತುಂಬಿಸಿ ಕೊಂಡು ಬರುತ್ತಿದ್ದ ದ್ವಿಚಕ್ರ ವಾಹನದ ಮಧ್ಯೆ ಅಪಘಾತ ಸಂಭವಿಸಿತ್ತು.


ಘಟನೆಯಿಂದಾಗಿ ದ್ವಿಚಕ್ರವಾಹನ ಸವಾರ ಮುಝಂಬಿಲ್ ಗಂಭೀರ ಗಾಯಗೊಂಡಿದ್ದರು. ಸ್ಥಳೀಯರು ಅವರನ್ನು ಕೂಡಲೇ ದೇರಳಕಟ್ಟೆಯ ಆಸ್ಪತ್ರೆಗೆ ದಾಖಲು ಮಾಡಿದ್ದರು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂಧಿಸದೆ ಆ.21ರಂದು ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here