ಕಡ್ಯ ಕೊಣಾಜೆ ಶಾಲೆಯ ತೀರ್ಥ ಕೆ. ಚೆಸ್‌ನಲ್ಲಿ ರಾಜ್ಯಮಟ್ಟಕ್ಕೆ

0

ಪುತ್ತೂರು: ಕಡ್ಯ ಕೊಣಾಜೆ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ತೀರ್ಥ ಕೆ. ರವರು ಶಾಲಾ ಶಿಕ್ಷಣ ಇಲಾಖಾ ವತಿಯಿಂದ ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ದ.ಕ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರು ಎಸ್‌ಡಿಎಂಸಿ ಸದಸ್ಯರಾದ ರಾಮಣ್ಣ ಆಚಾರಿ ಗುಜ್ಜಲ ಮತ್ತು ಅಡುಗೆ ಸಿಬ್ಬಂದಿ ಪ್ರೇಮಲತಾ ದಂಪತಿ ಪುತ್ರಿ. ಶಾಲಾ ಮುಖ್ಯ ಶಿಕ್ಷಕ ರಾಮಕೃಷ್ಣ ಕೆ. ಮತ್ತು ಎಸ್‌ಡಿಎಂಸಿ ಅಧ್ಯಕ್ಷ ವಾಸುದೇವ ಕೆ ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here