ಗೌರಿ -ಗಣೇಶ ಹಬ್ಬ ಆಚರಣೆಗೆ ಹೊರಬಿತ್ತು ಜಿಲ್ಲಾಡಳಿತದ ಮಾರ್ಗಸೂಚಿ

0

ಕೆರೆ, ಬಾವಿಗಳಲ್ಲಿ ಮೂರ್ತಿ ವಿಸರ್ಜನೆ ನಿಷೇಧ
ಸಾರ್ವಜನಿಕ ಆಚರಣೆಗೆ ಸ್ಥಳೀಯ ಸಂಸ್ಥೆ, ಪೊಲೀಸ್ ಇಲಾಖೆಯಿಂದ ಅನುಮತಿ ಕಡ್ಡಾಯ
ರಾತ್ರಿ 10ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕಗಳ ಬಳಕೆ ನಿಷೇಧ

ಪುತ್ತೂರು: ಈ ಬಾರಿಯ ಗೌರಿ ಗಣೇಶ ಹಬ್ಬವನ್ನು ಸಾರ್ವಜನಿಕರು ಪರಿಸರ ಸ್ನೇಹಿಯಾಗಿ ಆಚರಿಸಬೇಕು ಎಂದು ದ.ಕ.ಜಿಲ್ಲಾಡಳಿತ ಸೂಚಿಸಿದೆ.
ವಿಗ್ರಹ ವಿಸರ್ಜನೆ ಕಾರಣದಿಂದ ಉಂಟಾಗುವ ಮಾಲಿನ್ಯದಿಂದ ನೈಸರ್ಗಿಕ ಜಲಮೂಲ ಸಂರಕ್ಷಿಸುವ ನಿಟ್ಟಿನಲ್ಲಿ ಫ್ಲಾಸ್ಟರ್ ಆಫ್ ಪ್ಯಾರೀಸ್ ಮತ್ತು ರಾಸಾಯನಿಕ ಬಣ್ಣ ಲೇಪಿತವಾದ ಗೌರಿ ಮತ್ತು ಗಣೇಶ ವಿಗ್ರಹಗಳನ್ನು ಕೆರೆ, ಬಾವಿ ಮುಂತಾದ ಜಲಮೂಲಗಳಲ್ಲಿ ವಿಸರ್ಜಿಸಿರುವುದನ್ನು ನಿಷೇಧಿಸಲಾಗಿದೆ. ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಅನುಸಾರ ಕ್ರಮ ಕೈಗೊಳ್ಳಲಾಗುವುದು.

ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣ ಲೇಪಿತ ವಿಗ್ರಹಗಳನ್ನು ಪ್ರತಿಷ್ಠಾಪಿಸಿ ಗುರುತಿಸಿರುವ ಸ್ಥಳಗಳಲ್ಲೇ ವಿಸರ್ಜಿಸಬೇಕು. ಸಾರ್ವಜನಿಕವಾಗಿ ಪ್ರತಿಷ್ಠಾಪಿಸಲಾಗುವ ಗಣೇಶ ವಿಗ್ರಹಗಳನ್ನು ಪ್ರತಿಯೊಂದು ಸಮಿತಿಯವರು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಯಿಂದ ನಿಬಂಧನೆಗೊಳಪಟ್ಟ ಅನುಮತಿ ಪಡೆದ ಬಳಿಕವೇ ಸ್ಥಾಪಿಸಬೇಕು. ರಾತ್ರಿ 10ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕಗಳ ಬಳಕೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಯವರ ಕಛೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here