ನೆಲ್ಯಾಡಿ ಶ್ರೀರಾಮ ವಿದ್ಯಾಲಯದಲ್ಲಿ ರಕ್ಷಾ ಬಂಧನ

0

ನೆಲ್ಯಾಡಿ: ಇಲ್ಲಿನ ಶ್ರೀರಾಮ ವಿದ್ಯಾಲಯದಲ್ಲಿ ರಕ್ಷಾ ಬಂಧನ ಕಾರ್ಯಕ್ರಮವನ್ನು ಆ.19ರಂದು ಆಚರಿಸಲಾಯಿತು.
ಶ್ರೀರಾಮ ವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯ ಸುಬ್ರಾಯ ಪುಣಚ ಅವರು ರಕ್ಷಾ ಬಂಧನ ಆಚರಣೆಯ ಹಿನ್ನೆಲೆಯನ್ನು ತಿಳಿಸಿದರು. ಶಾಲಾ ಮುಖ್ಯಗುರು ಗಣೇಶ್ ವಾಗ್ಲೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾಲಯದ ಎಲ್ಲಾ ವಿದ್ಯಾರ್ಥಿಗಳು ಪರಸ್ಪರ ರಕ್ಷೆಯನ್ನು ಕಟ್ಟುವ ಮೂಲಕ ರಕ್ಷಾಬಂಧನವನ್ನು ಆಚರಿಸಿಕೊಂಡರು. ವಿನ್ಯಶ್ರೀ ಮಾತಾಜಿ ಸ್ವಾಗತಿಸಿದರು. ಗಣೇಶ್ ವಾಗ್ಲೆ ವಂದಿಸಿದರು. ಶಾಲೆಯ ಮಾತಾಜಿ ವೃಂದದವರು ಹಾಜರಿದ್ದರು. ಶಿಕ್ಷಕರು ನೆಲ್ಯಾಡಿ ನಗರದ ವಿವಿಧ ಇಲಾಖೆಯ ಅಧಿಕಾರಿಗಳಿಗೆ ರಾಖಿ ಕಟ್ಟುವ ಮೂಲಕ ಶುಭಾಶಯ ವಿನಿಮಯ ಮಾಡಿಕೊಳ್ಳಲಾಯಿತು.

LEAVE A REPLY

Please enter your comment!
Please enter your name here