ಪದವಿಪೂರ್ವ ಕಾಲೇಜುಗಳ ನೌಕರರ ಸಹಕಾರ ಸಂಘದ ಮಹಾಸಭೆ

0

ಪುತ್ತೂರು: ಪುತ್ತೂರಿನಲ್ಲಿ ಶಾಖೆ ಹೊಂದಿರುವ ಪದವಿಪೂರ್ವ ಕಾಲೇಜುಗಳ ನೌಕರರ ಸಹಕಾರ ಸಂಘ ಮಂಗಳೂರು ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆ ಆ.17ರಂದು ಮಂಗಳೂರು ನಂತೂರಿನಲ್ಲಿರುವ ಡಾ. ಎನ್.ಎಸ್.ಎ.ಎಂ. ಪದವಿ ಪೂರ್ವ ಕಾಲೇಜು ಸಭಾಭವನದಲ್ಲಿ ಜರುಗಿತು.


ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಎನ್ ದುಗ್ಗಪ್ಪ ಮಾತನಾಡಿ, ಆರು ವರ್ಷಗಳ ಹಿಂದೆ ಪ್ರಾರಂಭಗೊಂಡ ಪ.ಪೂ.ಕಾ ನೌಕರರ ಸಹಕಾರ ಸಂಘದಲ್ಲಿ 1500 ಶಿಕ್ಷಕ, ಶಿಕ್ಷಕೇತರರ ಸದಸ್ಯತ್ವವನ್ನು ಹೊಂದಿದೆ. ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢ, ಪದವಿಪೂರ್ವ ಹಾಗೂ ಪದವಿ ಕಾಲೇಜುಗಳ ಶಿಕ್ಷಕ ಮತ್ತು ಶಿಕ್ಷಕೇತರರು ಕಳೆದ ಸಾಲಿನಲ್ಲಿ ಸುಮಾರು ಏಳು ಕೋಟಿ ರೂಪಾಯಿಗಳ ಸಾಲವನ್ನು ಪಡೆದು ಕೊಂಡಿರುತ್ತಾರೆ. ಕಳೆದ ಆರು ವರ್ಷಗಳಲ್ಲಿ ಒಟ್ಟಾರೆ 30 ಕೋಟಿ ರೂಪಾಯಿ ವ್ಯವಹಾರ ವೃದ್ಧಿ ಆಗಿದೆ. 2023-24ನೇ ಸಾಲಿನಲ್ಲಿ ಶೇ.10 ಡಿವಿಡೆಂಡ್ ನೀಡುವುದರೊಂದಿಗೆ ಸಂಘವು ಆರೋಗ್ಯಪೂರ್ಣವಾಗಿ ಬೆಳವಣಿಗೆಯನ್ನು ಕಾಣುತ್ತಾ ಇದೆ. ಮಂಗಳೂರಿನಲ್ಲಿ ತನ್ನ ಕೇಂದ್ರ ಕಚೇರಿಯನ್ನು ಹೊಂದಿ ಪುತ್ತೂರು ಮತ್ತು ಕಡಬಗಳಲ್ಲಿ ಶಾಖೆಗಳನ್ನು ಹೊಂದಿರುವ ಸಂಘವು ವೈಯಕ್ತಿಕ ಸಾಲ ಜೊತೆಗೆ ಚಿನ್ನಾಭರಣ ಅಡಮಾನ ಸಾಲವನ್ನು ನೀಡುತ್ತಾ ಬಂದಿದೆ. ಮುಂದಿನ ವರ್ಷಗಳಲ್ಲಿ ಮೂಡುಬಿದಿರೆ ಮತ್ತು ತೊಕ್ಕುಟ್ಟಿನಲ್ಲಿ ತನ್ನ ಶಾಖೆಗಳನ್ನು ತೆರೆದು ಸದಸ್ಯರಿಗೆ ಸಾಲ ಸವಲತ್ತುಗಳನ್ನು ವಿಸ್ತರಿಸಲಿದೆ ಎಂದು ತಿಳಿಸಿದರು.


ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ ಆಳ್ವ ವರದಿ ಹಾಗೂ ಬಜೆಟ್ ಮಂಡಿಸಿದರು.2023-24 ನೇ ಸಾಲಿನಲ್ಲಿ ನಿವೃತ್ತರಾದ ಪ್ರಾಂಶುಪಾಲ ಗಂಗಾಧರ ಶೆಟ್ಟಿ ಮತ್ತು ಶಿಕ್ಷಕ ಶ್ರೀಕೃಷ್ಣ ಇವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಪ್ರಾಚಾರ್ಯರ ಸಂಘದ ಅಧ್ಯಕ್ಷ ಜಯಾನಂದ ಸುವರ್ಣ ನಿರ್ದೇಶಕ ವಿಠಲ. ಎ., ಶೇಖರ್ ರೈ, ಸಂಧ್ಯಾ ಕುಮಾರಿ, ನವೀನ್ ಕುಮಾರ್, ಕಿಶೋರ್ ಕುಮಾರ್ ಮತ್ತು ಸಿಬ್ಬಂದಿ ವರ್ಗ ಹಾಗೂ ಸದಸ್ಯರು ಉಪಸ್ಥಿತರಿದ್ದರು.


ಉಪಾಧ್ಯಕ್ಷ ಗಂಗಾಧರ ಆಳ್ವ ಸ್ವಾಗತಿಸಿದರು. ನಿರ್ದೇಶಕರಾದ ಉಮೇಶ್ ಕರ್ಕೆರ ತಿಳುವಳಿಕೆ ಓದಿದರು. ಯುಸುಫ್ ಲೆಕ್ಕಪತ್ರ ಮಂಡಿಸಿದರು. ಡಾ. ನವೀನ್ ಶೆಟ್ಟಿ ವಂದಿಸಿದರು.

LEAVE A REPLY

Please enter your comment!
Please enter your name here