ಜೋಸ್ ಅಲೂಕ್ಕಾಸ್‌ನಿಂದ ಬೆಳಿಯೂರುಕಟ್ಟೆ ಪ.ಪೂ ಕಾಲೇಜಿಗೆ ಕಂಪ್ಯೂಟರ್ ಕೊಡುಗೆ

0

ಪುತ್ತೂರು:ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜೋಸ್ ಅಲುಕ್ಕಾಸ್‌ನಿಂದ ಬೆಳಿಯೂರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಸುಮಾರು ರೂ.46,000 ವೆಚ್ಚದ ಸಿಪಿಯು, ಕಂಪ್ಯೂಟರ್ ಹಾಗೂ ಪ್ರಿಂಟರ್‌ನ್ನು ಕೊಡುಗೆಯಾಗಿ ನೀಡಿದರು.


ಕಾಲೇಜಿನಲ್ಲಿ ಆ.20ರಂದು ನಡೆದ ಕಾರ್ಯಕ್ರಮದಲ್ಲಿ ಜೋಸ್ ಅಲುಕ್ಕಾಸ್‌ನ ಪುತ್ತೂರು ಶಾಖೆಯ ವ್ಯವಸ್ಥಾಪಕ ರತೀಶ್ ಸಿ.ಪಿ ಹಾಗೂ ಸಿಬಂದಿ ಉದಯ ಕುಮಾರ್ ಕುಲಾಲ್‌ರವರು ಪ್ರಾಂಶುಪಾಲರು ಮತ್ತು ಎಸ್‌ಡಿಎಂಸಿ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು. ಕಂಪ್ಯೂಟರ್ ಕೊಡುಗೆ ನೀಡಿದ ಅಲುಕ್ಕಾಸ್‌ನ ಪುತ್ತೂರು ಶಾಖೆಯ ವ್ಯವಸ್ಥಾಪಕ ರತೀಶ್ ಸಿ.ಪಿ. ಹಾಗೂ ಸಿಬಂದಿ ಉದಯ ಕುಮಾರ್ ಕುಲಾಲ್‌ರವರನ್ನು ಸನ್ಮಾನಿಸಿ ಗೌರವಿಸಿದರು.


ಪ್ರಾಂಶುಪಾಲ ಹರಿಪ್ರಕಾಶ್ ಬೈಲಾಡಿ ಅಧ್ಯಕ್ಷತೆ ವಹಿಸಿದ್ದರು. ಎಸ್‌ಡಿಎಂಸಿ ಕಾರ್ಯಾಧ್ಯಕ್ಷ ಪ್ರಕಾಶ್‌ಚಂದ್ರ ಆಳ್ವ, ಪ್ರೌಢಶಾಲಾ ವಿಭಾಗದ ಮುಖ್ಯಸ್ಥೆ ಸುನೀತಾ ಎಂ. ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.


ವಿದ್ಯಾರ್ಥಿಗಳಾದ ಶ್ರೀಕೃಪಾ ಹಾಗೂ ಅಭಿಶ್ರೀ ಪ್ರಾರ್ಥಿಸಿದರು. ಉಪನ್ಯಾಸಕಿ ನಮಿತ ಎಂ.ಎ ಸ್ವಾಗತಿಸಿದರು. ಇಂದಿರಾ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು. ರವಿಕಲಾ ಟಿ ವಂದಿಸಿದರು.

LEAVE A REPLY

Please enter your comment!
Please enter your name here