ಉಪ್ಪಿನಂಗಡಿ: ಶ್ರೀ ವರ ಮಹಾಲಕ್ಷ್ಮೀ ಪೂಜೆ

0

ಉಪ್ಪಿನಂಗಡಿ: ಇಲ್ಲಿನ ವನಿತಾ ಸಮಾಜದ ವತಿಯಿಂದ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ನೇತ್ರಾವತಿ ಸಮುದಾಯ ಭವನದಲ್ಲಿ ಆ.23ರಂದು ಶ್ರೀ ವರ ಮಹಾಲಕ್ಷ್ಮೀ ವ್ರತದ ಪೂಜೆ ನಡೆಯಿತು.
ಬೆಳಗ್ಗೆ ಗಣಪತಿ ಹವನ, ಶ್ರೀ ಶಾರದಾ ವನಿತಾ ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಸೇವೆ, ಕಲಶ ಪ್ರತಿಷ್ಠೆಯಾಗಿ ಮಹಾಪೂಜೆ ನಡೆಯಿತು. ಬಳಿಕ ಪ್ರಸಾದ ವಿತರಣೆಯಾಗಿ ಅನ್ನಸಂತರ್ಪಣೆ ನಡೆಯಿತು. ಶ್ರೀ ದೇವಾಲಯದ ಪ್ರಧಾನ ಅರ್ಚಕರಾದ ವೇ.ಮೂ. ಹರೀಶ್ ಉಪಾಧ್ಯಾಯ ಧಾರ್ಮಿಕ ವಿಧಿ- ವಿಧಾನವನ್ನು ನಡೆಸಿಕೊಟ್ಟರು. ಈ ಸಂದರ್ಭ ಉಪ್ಪಿನಂಗಡಿ ವನಿತಾ ಸಮಾಜದ ಗೌರವಾಧ್ಯಕ್ಷೆ ಸುಭದ್ರಾ ಭಟ್, ಸಂಚಾಲಕಿ ಗೀತಾಲಕ್ಷ್ಮೀ ತಾಳ್ತಜೆ, ಅಧ್ಯಕ್ಷೆ ಉಷಾ ಚಂದ್ರ ಮುಳಿಯ, ಪ್ರಧಾನ ಕಾರ್ಯದರ್ಶಿ ಪುಷ್ಪಲತಾ ಜನಾರ್ದನ್, ಕೋಶಾಧಿಕಾರಿ ಶ್ಯಾಮಲಾ ಶೆಣೈ, ಸಹ ಸಂಚಾಲಕಿ ರಾಧಾ ಮೋನಪ್ಪ, ಉಪಾಧ್ಯಕ್ಷೆ ಜ್ಯೋತಿ ಹೇರಂಭ ಶಾಸ್ತ್ರಿ, ಜೊತೆ ಕಾರ್ಯದರ್ಶಿ ಸುಜಾತ ಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here