ಬಂಟರ ಬಡಗನ್ನೂರು ಗ್ರಾಮ ಸಮಿತಿ ರಚನೆ- ಅಧ್ಯಕ್ಷರಾಗಿ ಸುಧಾಕರ ಶೆಟ್ಟಿ, ಕಾರ್ಯದರ್ಶಿ ಪ್ರಕಾಶ್ ರೈ, ಕೋಶಾಧಿಕಾರಿ ಕಿರಣ್ ಕುಮಾರ್ ರೈ

0

ಪುತ್ತೂರು: ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಅಧ್ಯಕ್ಷತೆಯಲ್ಲಿ ಬಡಗನ್ನೂರು ಬಂಟರ ಗ್ರಾಮ ಸಮಿತಿಯನ್ನು ರಚನೆ ಮಾಡಲಾಯಿತು. ಅಧ್ಯಕ್ಷರಾಗಿ ಸುಧಾಕರ್ ಶೆಟ್ಟಿ ಮಂಗಳಾದೇವಿ, ಕಾರ್ಯದರ್ಶಿ ಪ್ರಕಾಶ್ ರೈ ಕೊಯಿಲ, ಕೋಶಾಧಿಕಾರಿ ಕಿರಣ್ ಕುಮಾರ್ ರೈ ಅನಿಲೆ, ಉಪಾಧ್ಯಕ್ಷರುಗಳಾಗಿ ಸಂತೋಷ್ ಆಳ್ವ ಗಿರಿಮನೆ ದೇವಿಪ್ರಭ ರೈ, ಆಶಾ ರೈ ಕೊಯಿಲ, ಪ್ರಭಾಕರ ರೈ ಕೆಳಗಿನಪೇರಾಲು, ನವೀನ್ ಪಕಳ, ಉಪನ್ಯಾಸಕ ಹರಿಪ್ರಸಾದ್ ರೈ, ಸಲಹೆಗಾರರಾಗಿ ಸುಬ್ಬಯ್ಯ ರೈ ಹಲಸಿನಹಡಿ , ಭಾಸ್ಕರ ರೈ ಅಣಿಲೆ, ಪ್ರಸನ್ನ ರೈ , ಜಯರಾಜ ಶೆಟ್ಟಿ ಅಣಿಲೆ, ಅಮರನಾಥ ರೈ ಬೆಳಿಪ್ಪಾಡಿ ಸರ್ವಾನುಮತದಿಂದ ಆಯ್ಕೆಯಾದರು.

ಬಂಟರ ಸಂಘದ ಮಹಿಳಾ ವಿಭಾಗದ ಅಧ್ಯಕ್ಷರಾದ ಗೀತಾ ಮೋಹನ್ ರೈ ನರಿಮೊಗರು, ಯುವ ವಿಭಾಗದ ಅಧ್ಯಕ್ಷ ಹರ್ಷಕುಮಾರ್ ರೈ ಮಾಡಾವು, ಬಂಟರ ಸಂಘದ ಮಾಜಿ ಕಾರ್ಯದರ್ಶಿ ಮೋಹನ್ ರೈ ನರಿಮೊಗರು, ಅನಿತಾ ಹೇಮನಾಥ್ ಶೆಟ್ಟಿ, ಸುಧಾಕರ ಶೆಟ್ಟಿ ಮಂಗಳಾದೇವಿ ದಂಪತಿ, ಮಾತೃ ಸಂಘದ ನಿರ್ದೇಶಕ ಜಯಪ್ರಕಾಶ್ ರೈ ನೂಜಿಬೈಲು ಉಪಸ್ಥಿತರಿದ್ದರು. ಬಂಟರ ಸಂಘದ ನಿರ್ದೇಶಕ ಸತೀಶ್ ರೈ ಕಟ್ಟಾವು ಸ್ವಾಗತಿಸಿದರು. ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ ವಂದಿಸಿದರು. ಶಾರ್ವಿ ರೈ ಕಟ್ಟಾವು ಪ್ರಾರ್ಥನೆಗೈದರು. ಬಂಟರ ಸಂಘದ ನಿರ್ದೇಶಕ ರವಿಪ್ರಸಾದ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here