ನಾಳೆ(ಆ.27): ಕುಂಬ್ರ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮಹಾಸಭೆ

0

ಪುತ್ತೂರು: ಕುಂಬ್ರ ಮೂರ್ತೆದಾರರ ಸೇವಾ ಸಹಕಾರಿ ಸಂಘದ 2024-25 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಆ.27 ರಂದು ಬೆಳಿಗ್ಗೆ ಕುಂಬ್ರ ಅಕ್ಷಯ ಆರ್ಕೇಡ್ ಮಿನಿ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಆರ್.ಸಿ ನಾರಾಯಣರವರ ಸಭಾಧ್ಯಕ್ಷತೆಯಲ್ಲಿ ನಡೆಯಲಿದೆ.

ಅತಿಥಿಗಳಾಗಿ ದ.ಕ ಜಿಲ್ಲಾ ಮೂರ್ತೆದಾರರ ಸಹಕಾರಿ ಮಹಾಮಂಡಲದ ಅಧ್ಯಕ್ಷ ಸಂಜೀವ ಪೂಜಾರಿ, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕೆಡೆಂಜಿ, ಅಕ್ಷಯ ಗ್ರೂಪ್ಸ್‌ನ ಜಯಂತ ನಡುಬೈಲ್ ಭಾಗವಹಿಸಲಿದ್ದಾರೆ.

ಸರ್ವ ಸದಸ್ಯರು ಸಕಾಲದಲ್ಲಿ ಸಭೆಯಲ್ಲಿ ಭಾಗವಹಿಸಿ ಸಂಘದ ಬೆಳವಣಿಗೆಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಬೇಕಾಗಿ ಆಡಳಿತ ಮಂಡಳಿಯ ಅನುಮತಿ ಮೇರೆಗೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಂ.ಎನ್. ಚಂದ್ರಕಾಂತ ಶಾಂತಿವನರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here