ಪ್ರೌಢಶಾಲಾ ಬಾಲಕರ ಮ್ಯಾಟ್ ಅಂಕಣದ ಕಬಡ್ಡಿ – ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆ ತಂಡ ಪ್ರಥಮ

0

ರಾಮಕುಂಜ: ವಿಶ್ವ ಹಿಂದೂ ಪರಿಷತ್ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿಯ ಆಶ್ರಯದಲ್ಲಿ ದಿ.ರಾಮಕೃಷ್ಣ ಭಟ್ ಸ್ಮರಣಾರ್ಥ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ನಡೆದ ಪ್ರೌಢಶಾಲಾ ಬಾಲಕರ ಮ್ಯಾಟ್ ಅಂಕಣದ ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ.

  • ತಂಡದ ಮಹಾಂತೇಶ್ ಬೆಸ್ಟ್ ರೈಡರ್ ಹಾಗೂ ಅಜಯ್ ಬೆಸ್ಟ್ ಡಿಪೆಂಡರ್ ಪ್ರಶಸ್ತಿಯನ್ನು ಪಡೆದುಕೊಂಡರು. ವಿದ್ಯಾರ್ಥಿಗಳಿಗೆ ಮಾಧವ ಬಿ.ಕೆ, ಜಸ್ವಂತ್ ಹಾಗೂ ಮಂಜುನಾಥ್ ತರಬೇತಿ ನೀಡಿದ್ದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲಾ ರೈ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಮುಖ್ಯ ಗುರು ಸತೀಶ್ ಭಟ್, ಶಾಲಾ ಶಿಕ್ಷಕ ವೃಂದವರು, ಆಡಳಿತ ಮಂಡಳಿಯವರು, ಶಾಲಾ-ಪೋಷಕರು, ಹಿರಿಯ ವಿದ್ಯಾರ್ಥಿಗಳು ಸಹಕರಿಸಿದ್ದರು.

LEAVE A REPLY

Please enter your comment!
Please enter your name here