ಲೋಕಕಲ್ಯಾಣಾರ್ಥ ಶಂಕರಾಪುರ ಶ್ರೀಸಾಯಿ ಈಶ್ವರ ಗುರೂಜಿಯಿಂದ ಮಹಾಲಿಂಗೇಶ್ವರ ದೇವಸ್ಥಾನ ಭೇಟಿ

0

ಪುತ್ತೂರು: ಲೋಕಕಲ್ಯಾಣಾರ್ಥವಾಗಲು ಸ್ವಾಮೀಜಿಯೋರ್ವರು ತೀರ್ಥಯಾತ್ರೆ ಕೈಗೊಂಡಿದ್ದು, ಆ.28 ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.


ಶಂಕರಾಪುರ ಉಡುಪಿಯ ಸಾಯಿ ಮುಖ್ಯ ಪ್ರಾಣ ದೇವಸ್ಥಾನದ ಸ್ವಾಮೀಜಿ ಶ್ರೀಸಾಯಿ ಈಶ್ವರ ಗುರೂಜಿ ಅವರು 108 ಕ್ಷೇತ್ರಕ್ಕೆ ಭೇಟಿ ನೀಡಿ ದೇವರಲ್ಲಿ ಪ್ರಾರ್ಥನೆ ಮಾಡುವ ಸಂಕಲ್ಪ ಕೈಗೊಂಡತೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಳದ ಸತ್ಯ ಧರ್ಮ ನಡೆಯಲ್ಲಿ ಪ್ರಾರ್ಥನೆ ಮಾಡಿ ಬಿಲ್ವ ಪತ್ರೆ ಸಸಿ ಸಮರ್ಪಣೆ ಮಾಡಿದರು.

ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಪ್ರಸಾದ ನೀಡಿದರು. ದೇವಳದ ಕಚೇರಿ ಸಿಬಂದಿ ರವೀಂದ್ರ ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭ ಪ್ರಶಾಂತಿ ಸದ್ಭಾವನ ಟ್ರಸ್ಟ್ ಅಧ್ಯಕ್ಷ ಮಧುಸೂದನ್ ನಾಯಕ್, ದೇವಳದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ತಾ.ಪಂ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಕಲಾವಿದ ಕೃಷ್ಣಪ್ಪ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here