ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಎಸ್.ಪಿ.ಯತೀಶ್. ಎನ್.ಭೇಟಿ

0

ಸುಬ್ರಹ್ಮಣ್ಯ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಯತೀಶ್. ಎನ್. ಅವರು ಆ.29ರಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಪರಿವೀಕ್ಷಣೆ ನಡೆಸಿದರು.

ಪೊಲೀಸ್ ಠಾಣೆಯ ದಾಖಲಾತಿ, ಕಡತಗಳ ವಿಲೇವಾರಿ ಹಾಗೂ ಪೊಲೀಸ್ ಠಾಣೆಯ ಸುತ್ತಮುತ್ತಲು ಪರಿಸರ ಸ್ವಚ್ಛತೆಯನ್ನು ಪರಿಶೀಲಿಸಿದರು.ಬಳಿಕ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಬ್ರೀಫಿಂಗ್ ನಡೆಸಿದರು.

ಈ ಸಂದರ್ಭದಲ್ಲಿ ಅಧಿಕಾರಿಗಳ ಜೊತೆ ಮಾತನಾಡಿ ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು, ಠಾಣಾ ಕರ್ತವ್ಯಗಳ ಬಗ್ಗೆ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.

ಸುಬ್ರಹ್ಮಣ್ಯದ ಪಾರ್ಕಿಂಗ್ ವ್ಯವಸ್ಥೆಗೆ ಪೂರಕ ಕ್ರಮಕೈಗೊಂಡಿರುವ ಬಗ್ಗೆ ಹಾಗೂ ಠಾಣೆಯ ನೂತನ ಕಟ್ಟಡದ ಕಾಮಗಾರಿಯ ಮಾಹಿತಿ ಪಡೆದುಕೊಂಡರು.ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಠಾಣೆಯ ಎಸೈ ಕಾರ್ತಿಕ್ ಹಾಗೂ ಸಿಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here