ಪುತ್ತೂರು: ಯುವರಂಗ ಕೆದಂಬಾಡಿ ಇದರ ಆಶ್ರಯದಲ್ಲಿ ಶ್ರೀರಾಮ ಮಂದಿರ ಕೆದಂಬಾಡಿ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಇದರ ಸಹಕಾರದೊಂದಿಗೆ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಸೆ.1ರಂದು ಶ್ರೀರಾಮ ಮಂದಿರ ಕೆದಂಬಾಡಿ ಇಲ್ಲಿ ಜರಗಲಿದೆ. ಬೆಳಿಗ್ಗೆ ಉದ್ಘಾಟನೆ ಬಳಿಕ ಶ್ರೀಕೃಷ್ಣ ವೇಷ ಸ್ಪರ್ಧೆ, ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು ನಡೆಯಲಿವೆ. ಸಭಾ ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ. ಮಧ್ಯಾಹ್ನ ಸಾರ್ವಜನಿಕ ಇದ್ಯಪೆ ಕುಟುಂಬಸ್ಥರ ಪ್ರಾಯೋಜಕತ್ವದಲ್ಲಿ ಅನ್ನಸಂತರ್ಪಣೆ ಜರಗಲಿದೆ. ಸಂಜೆ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಯುವರಂಗದ ಅಧ್ಯಕ್ಷ ನಿತೇಶ್ ರೈ ಕೋರಂಗ ತಿಳಿಸಿದ್ದಾರೆ.
©