ಸುದಾನ ಪ.ಪೂರ್ವ ಕಾಲೇಜು ರಕ್ಷಕ-ಶಿಕ್ಷಕ ಸಂಘ ರಚನೆ

0

ಅಧ್ಯಕ್ಷ: ಸಂತೋಷ್ ಭಂಡಾರಿ, ಕಾರ್ಯದರ್ಶಿ: ಸವಿತ,ಕೋಶಾಧಿಕಾರಿ: ಎಮಿಲ್ಡಾ ಸುಮ

ಪುತ್ತೂರು: ಸುದಾನ ಸಮೂಹ ಶಿಕ್ಷಣ ಸಂಸ್ಥೆಗಳ ಸುದಾನ ಪದವಿ ಪೂರ್ವ ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ಶಾಲಾ ಸಂಚಾಲಕ ಡಾ.ಪೀಟರ್ ವಿಲ್ಸನ್ ಪ್ರಭಾಕರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.


ಅಧ್ಯಕ್ಷರಾಗಿ ಒಳಮೊಗ್ರು ಚಿಲ್ಮೆತ್ತಾರು ನಿವಾಸಿ, ಪುತ್ತೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಸಂತೋಷ್ ಭಂಡಾರಿ ಚಿಲ್ಮೆತ್ತಾರು, ಕಾರ್ಯದರ್ಶಿಯಾಗಿ ಮಂಗಳೂರು ಯೇನಪೋಯ ಮೆಡಿಕಲ್ ಕಾಲೇಜಿನ ಮೆಡಿಸಿನ್ ವಿಭಾಗದ ಮುಖ್ಯಸ್ಥೆ ಸವಿತಾ, ಕೋಶಾಧಿಕಾರಿಯಾಗಿ ವಿಠಲ್ ಜೇಸಿಸ್ ಆಂಗ್ಲ ಮಾದ್ಯಮ ಪ್ರೌಢಶಾಲೆಯ ಸಹ ಶಿಕ್ಷಕಿ ಎಮಿಲ್ಡ ಸುಮ ಸಲ್ದಾನ್ಹಾರವರು ಆಯ್ಕೆಯಾಗಿದ್ದಾರೆ.


ಕಾಲೇಜಿನ ಪ್ರಾಂಶುಪಾಲ ಸುಪ್ರೀತ್ ಕೆ.ಸಿ, ಕಾಲೇಜಿನ ಉಪನ್ಯಾಸಕ ಹಾಗೂ ಆಡಳಿತ ಸಿಬ್ಬಂದಿ ವರ್ಗ ಆಯ್ಕೆ ಪ್ರಕ್ರಿಯೆಯಲ್ಲಿ ಸಹಕರಿಸಿದರು.

LEAVE A REPLY

Please enter your comment!
Please enter your name here