ಯುವ ಸಂಗೀತ ನಿರ್ದೇಶಕ ಪ್ರಸಾದ್ ಕೆ ಶೆಟ್ಟಿಯವರಿಗೆ ‘ಉತ್ತಮ ಹಿನ್ನೆಲೆ ಸಂಗೀತ’ ಪ್ರಶಸ್ತಿ

0

ಪುತ್ತೂರು: ಸಿನಿಮಾ ರಂಗದ ಸಂಗೀತ ಕ್ಷೇತ್ರದಲ್ಲಿ ಮಿಂಚುತ್ತಿರುವ ಮೂಲತಃ ಸಂಪ್ಯ ಕುಕ್ಕಾಡಿ ನಿವಾಸಿಯಾಗಿದ್ದು ಪ್ರಸ್ತುತ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಕಲ್ಲಾಜೆ ಎಂಬಲ್ಲಿ ನೆಲೆಸಿರುವ ಪ್ರಸಾದ್ ಕೆ ಶೆಟ್ಟಿ (Prasad K Shetty) ಅವರು ‘ಉತ್ತಮ ಹಿನ್ನೆಲೆ ಸಂಗೀತ’ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಆ.31ರಂದು ಅರ್ಜುನ್ ಲೂಯಿಸ್ ನಿರ್ದೇಶನದ ಪರ್ಸ್ಪೆಕ್ಟಿವ್ (Perspective) ಎಂಬ ಕಿರುಚಿತ್ರಕ್ಕೆ (Short Movie) ಹಿನ್ನೆಲೆ ಸಂಗೀತ ನೀಡಿರುವ ಪ್ರಸಾದ್ ಕೆ ಶೆಟ್ಟಿ ಅವರು ಆ.31ರಂದು ತಮಿಳುನಾಡಿನ ಚೆನ್ನೈನಲ್ಲಿ ನಡೆದ ಕಾರ್ನರ್ ಸೀಟ್ ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್‌ನಲ್ಲಿ (International Film Festival) ತಮಿಳು ಚಿತ್ರರಂಗದ ಗಣ್ಯರಿಂದ ಉತ್ತಮ ಹಿನ್ನೆಲೆ ಸಂಗೀತ ಪ್ರಶಸ್ತಿಯನ್ನು ಸ್ವೀಕರಿಸಿದರು.

ದಿ.ವಿಠಲ ಶೆಟ್ಟಿ ಮತ್ತು ರತ್ನ ವಿ ಶೆಟ್ಟಿಯವರ ಪುತ್ರನಾದ ಪ್ರಸಾದ್ ಕೆ ಶೆಟ್ಟಿಯವರು ಪುತ್ತೂರು ತಾ.ಪಂ ನರೇಗಾ ತಾಂತ್ರಿಕ ಸಹಾಯಕರಾದ ಆಕಾಂಕ್ಷ ರೈ ಅವರ ಪತಿ. ಪ್ರಸಾದ್ ಕೆ ಶೆಟ್ಟಿ ಅವರು ಸಂಗೀತ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆಗಳನ್ನು ನೀಡುವ ಮೂಲಕ ಗುರುತಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here