ಮುದ್ಯ: ಶ್ರೀ ಪಾರ್ವತಿ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರಕ್ಕೆ ಶಿಲಾನ್ಯಾಸ

0

ಉಪ್ಪಿನಂಗಡಿ: ಬಜತ್ತೂರು ಗ್ರಾಮದ ಮುದ್ಯ ಪಾರಂತಿ ಶ್ರೀ ಪಾರ್ವತಿ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಕಾರ್ಯದ ಅಂಗವಾಗಿ ಶಿಲಾನ್ಯಾಸ ಕಾರ್ಯಕ್ರಮ ಸೆ.8ರಂದು ಬೆಳಿಗ್ಗೆ 10.22ರ ಶುಭ ಲಗ್ನದಲ್ಲಿ ನಡೆಯಿತು.


ಬ್ರಹ್ಮಶ್ರೀ ನಿಡುಂಬಳ್ಳಿ ತರವನಲ್ಲೂರು ಸತೀಶನ್ ನಂಬೂದರಿಪ್ಪಾಡ್‌ರವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ಕೃಷ್ಣಪ್ರಸಾದ ಉಡುಪ ಅವರು ಪೂಜಾ ವಿಧಿವಿಧಾನಗಳಿಗೆ ಸಹಕರಿಸಿದರು.

ಜೀರ್ಣೋದ್ದಾರ ಸಮಿತಿ ಸಲಹೆಗಾರ ಜಗನ್ನಾಥ ಚೌಟ ಅವರು ಮಾಹಿತಿ ನೀಡಿದರು. ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ವೇಣುಗೋಪಾಲ್ ನಾಯಕ್ ಕುಳ್ಳಾಜೆ, ಜೀರ್ಣೋದ್ದಾರ ಸಮಿತಿ ಪದಾಧಿಕಾರಿಗಳು, ಸದಸ್ಯರು, ದೇವಸ್ಥಾನದ ಬೈಲುವಾರು ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಊರ-ಪರವೂರು ಭಕ್ತಾದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here