ನಿಡ್ಪಳ್ಳಿ ದೇವಸ್ಥಾನದ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

0

ನಿಡ್ಪಳ್ಳಿ: ಶ್ರೀ ಶಾಂತದುರ್ಗಾ ದೇವಸ್ಥಾನ ಶ್ರೀ ಕ್ಷೇತ್ರ ನಿಡ್ಪಳ್ಳಿ ಇಲ್ಲಿ ಅ.3 ರಿಂದ 12 ರವರೆಗೆ ನಡೆಯಲಿರುವ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಸೆ.14ರಂದು ದೇವಾಲಯದಲ್ಲಿ ನಡೆಯಿತು.

ದೇವಸ್ಥಾನದ ಸಕ್ರೀಯ ಕಾರ್ಯಕರ್ತರಾದ ಪುರಂದರ ರೈ ಸೇರ್ತಾಜೆ ಬಿಡುಗಡೆ ಗೊಳಿಸಿದರು.ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಾರಾಯಣ ರೈ ಕೊಪ್ಪಳ, ಸದಸ್ಯರಾದ ಗೋಪಾಲಕೃಷ್ಣ ಭಟ್ ಕುಕ್ಕುಪುಣಿ, ರಾಮಚಂದ್ರ ಮಣಿಯಾಣಿ ಬೊಳುಂಬುಡೆ, ದೇವಸ್ಥಾನದ ಪ್ರಧಾನ ಅರ್ಚಕ ನವೀನ್ ಹೆಬ್ಬಾರ್ ಹಾಗೂ ಊರ ಭಕ್ತಾದಿಗಳು ಉಪಸ್ಥಿತರಿದ್ದರು. ಆಡಳಿತ ಮಂಡಳಿ ಕಾರ್ಯದರ್ಶಿ ಕುಮಾರ ನರಸಿಂಹ ಬುಳೆನಡ್ಕ ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here