ಪ್ರಧಾನಿ ನರೇಂದ್ರ ಮೋದಿ ಜನ್ಮದಿನಾಚರಣೆ – ಪುತ್ತೂರು ಬಿಜೆಪಿಯಿಂದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರುದ್ರಾಭಿಷೇಕ

0

ಮೋದಿಯವರಿಗೆ ಶ್ರೇಯೋಭಿವೃದ್ಧಿ, ಹೆಚ್ಚಿನ ಶಕ್ತಿ ನೀಡುವಂತೆ ಪ್ರಾರ್ಥನೆ – ಸಂಜೀವ ಮಠಂದೂರು, ದಯಾನಂದ ಶೆಟ್ಟಿ, ಶಿವಕುಮಾರ್, ಪ್ರಸನ್ನ ಕುಮಾರ್ ಮಾರ್ತ

ಪುತ್ತೂರು: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ ವಿಶೇಷ ಪ್ರಾರ್ಥನೆಯೊಂದಿಗೆ ರುದ್ರಾಭಿಷೇಕ ಸೇವೆ ಮಾಡಲಾಯಿತು.


ಪ್ರಧಾನಿ ನರೇಂದ್ರ ಮೋದಿಯವರು ಸುಧೀರ್ಘ ಆಡಳಿತದಲ್ಲಿ ಅವರ ಶ್ರೇಯೋಭಿವೃದ್ಧಿ ಮತ್ತು ಅವರಿಗೆ ಇನ್ನಷ್ಟು ಶಕ್ತಿ ನೀಡುವಂತೆ ಮಹಾಲಿಂಗೇಶ್ವರ ದೇವರಲ್ಲಿ ಪ್ರಾರ್ಥಿಸಿದ್ದೇವೆ. ಜೊತೆಗೆ ದೇಶದ ಮೇಲೆ ಬೇರೆ ಬೇರೆ ರೀತಿಯಲ್ಲಿ ದಬ್ಬಾಳಿಕೆ ಮಾಡುವ ಸಂದರ್ಭ ಮತಾಂದ ಶಕ್ತಿಗಳು ಅಪಾಯಕಾರಿ ಸನ್ನಿವೇಶಗಳನ್ನು ನಿರ್ಮಾಣ ಮಾಡಿದ ಸಂದರ್ಭದಲ್ಲಿ ದೇಶದ ಆಧ್ಯಾತ್ಮಿಕ ಬದುಕಿಗೆ ರಾಷ್ಟ್ರಾಭಿಮಾನ ತುಂಬುವ ನಿಟ್ಟಿನಲ್ಲಿ ದೇಶದ ಜನರು ಮೋದಿಯವರ ಜೊತೆ ಇದ್ದೇವೆ ಮತ್ತು ನಿಮಗೆ ಶಕ್ತಿಯನ್ನು ತುಂಬುವ ಕೆಲಸ ಭಗವಂತ ಮಾಡಲಿ ಎಂದು ಪ್ರಾರ್ಥಿಸಿದ್ದೇವೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರುಮಾರು, ನಗರ ಮಂಡಲದ ಅಧ್ಯಕ್ಷ ಶಿವಕುಮಾರ್, ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ ಅವರು ಹೇಳಿದರು. ಬಿಜೆಪಿ ಪ್ರಮುಖರು ಕಾರ್ಯಕರ್ತರು ಈ ಸಂದರ್ಭ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here