ಮೋದಿ ಹುಟ್ಟುಹಬ್ಬ: ಶಾಂತಿನಗರದಲ್ಲಿ ವಿಶೇಷ ಪೂಜೆ

0

ಉಪ್ಪಿನಂಗಡಿ: ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಬಿಜೆಪಿಯ ವತಿಯಿಂದ 34 ನೆಕ್ಕಿಲಾಡಿಯ ಶಾಂತಿನಗರದ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಿ, ಪ್ರಾರ್ಥನೆ ನೆರವೇರಿಸಲಾಯಿತು.
ಈ ಸಂದರ್ಭ ಬಿಜೆಪಿಯ ಪುತ್ತೂರು ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎನ್., ಬಿಜೆಪಿ ಶಕ್ತಿ ಕೇಂದ್ರದ ಸಂಚಾಲಕ ರಾಜೇಶ್ ಶಾಂತಿನಗರ, 34 ನೆಕ್ಕಿಲಾಡಿ ಗ್ರಾ.ಪಂ. ಅಧ್ಯಕ್ಷೆ ಸುಜಾತ ರೈ ಅಲಿಮಾರ್, ಉಪಾಧ್ಯಕ್ಷ ಹರೀಶ್ ಡಿ., ಸದಸ್ಯರಾದ ರಮೇಶ್ ಸುಭಾಷ್‌ನಗರ, ರತ್ನಾವತಿ, ವಿಜಯಕುಮಾರ್, ಪಕ್ಷದ ಪ್ರಮುಖರಾದ ಸದಾನಂದ ನೆಕ್ಕಿಲಾಡಿ, ಬಾಲಕೃಷ್ಣ ಚೌಟ, ವಿಶ್ವನಾಥ, ಸಂದೀಪ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here