ಈಶ್ವರಮಂಗಲ ಪೊಲೀಸ್ ಹೊರಠಾಣೆ ಕಟ್ಟಡ, ಇನ್ನಿತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಉದ್ಯಮಿ ಅಬ್ದುಲ್ ರಹಿಮಾನ್ ಹಾಜಿಯವರಿಂದ ಎಸ್.ಪಿಗೆ ಮನವಿ

0

ಪುತ್ತೂರು: ನೆ.ಮುಡ್ನೂರು ಗ್ರಾಮದ ಈಶ್ವರಮಂಗಲದಲ್ಲಿರುವ ಪೊಲೀಸ್ ಹೊರಠಾಣೆಗೆ ನೂತನ ಕಟ್ಟಡ ಹಾಗೂ ಇನ್ನಿತರ ಅವಶ್ಯಕತೆಗಳನ್ನು ಪೂರೈಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸಾರ್ವಜನಿಕರ ಪರವಾಗಿ ಉದ್ಯಮಿ ಅಬ್ದುಲ್ ರಹಿಮಾನ್ ಹಾಜಿ ಮೇನಾಲ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ ಸಲ್ಲಿಸಿದ್ದಾರೆ.

ಈಶ್ವರಮಂಗಲ ಹೊರಠಾಣೆಯು ಕೇರಳ ಗಡಿ ಭಾಗವಾಗಿದ್ದು ಇಲ್ಲಿನ ಪೊಲೀಸ್ ಠಾಣೆಯು ಬಾಡಿಗೆ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದೆ. ವ್ಯವಸ್ಥೆಗಳು ಸರಿ ಇಲ್ಲದೆ ಪೊಲೀಸರು ಸಮಸ್ಯೆ ಎದುರಿಸುತ್ತಿದ್ದಾರೆ. ಕಟ್ಟಡಕ್ಕೆ ಈಗಾಗಲೇ ಜಾಗ ಕಾಯ್ದಿರಿಸಲಾಗಿದ್ದು ಅಲ್ಲಿ ನೂತನ ಕಟ್ಟಡ ನಿರ್ಮಾಣ ಆಗಬೇಕಿದೆ. ಹೊರಠಾಣೆಯಲ್ಲಿ ಇಲಾಖಾ ವಾಹನವೂ ಇಲ್ಲ, ಸಿಬ್ಬಂದಿಗಳ ಕೊರತೆಯಿದೆ. ಇವೆಲ್ಲವನ್ನೂ ನೀಗಿಸಲು ಕ್ರಮ ವಹಿಸಬೇಕು ಎಂದು ಆಗ್ರಹಿಸಿರುವ ಮನವಿಯನ್ನು ಎಸ್.ಪಿಯವರಿಗೆ ಸಲ್ಲಿಸಲಾಗಿದೆ.

LEAVE A REPLY

Please enter your comment!
Please enter your name here