ಸೆ.19:ರೋಟರಿ ಸ್ವರ್ಣದಿಂದ ಶಿಕ್ಷಕರ ದಿನಾಚರಣೆ, ಗುರುವಂದನೆ ಕಾರ್ಯಕ್ರಮ

0

ಪುತ್ತೂರು; ರೋಟರಿ ಅಂತರರಾಷ್ಟ್ರೀಯ ಜಿಲ್ಲೆ 3181, ವಲಯ ಐದರ ರೋಟರಿ ಕ್ಲಬ್ ಪುತ್ತೂರು ಸ್ವರ್ಣದ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಗುರುವಂದನೆ ಕಾರ್ಯಕ್ರಮವು ಸೆ.19 ರಂದು ಸಂಜೆ ರೋಟರಿ ಮನೀಷಾ ಸಭಾಂಗಣದಲ್ಲಿ ನಡೆಯಲಿದೆ.

ರೋಟರಿ ಕ್ಲಬ್ ಪುತ್ತೂರು ಸ್ವರ್ಣ ಅಧ್ಯಕ್ಷ ಸುರೇಶ್ ಪಿ.ರವರು ಅಧ್ಯಕ್ಷತೆ ವಹಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ,  ಶಾಲಾ‌ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಲೋಕೇಶ್ ಸಿ.ರವರು ಹೂಡಿಕೆಯಾಗುತ್ತಿರುವ ಮಕ್ಕಳ ಶಿಕ್ಷಣದ ಒಳಿತು ಕೆಡುಕುಗಳು ಬಗ್ಗೆ ಮಾತನಾಡಲಿದ್ದಾರೆ. ಮುಖ್ಯ ಅತಿಥಿಗಳಿಗಳಾಗಿ ಮಂಗಳೂರು ಡಯಟ್ ಹಿರಿಯ ಉಪನ್ಯಾಸಕ ಶಶಿಧರ್ ಜಿ.ಎಸ್, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್, ರೋಟರಿ ಅಸಿಸ್ಟೆಂಟ್ ಗವರ್ನರ್ ಸೂರ್ಯನಾಥ ಆಳ್ವ, ವಲಯ ಸೇನಾನಿ ವೆಂಕಟ್ರಮಣ ಗೌಡ ಕಳುವಾಜೆ, ಕ್ಲಬ್ ಜಿ.ಎಸ್.ಆರ್ ಚಿದಾನಂದ ಬೈಲಾಡಿರವರು ಉಪಸ್ಥಿತಲಿದ್ದಾರೆ ಎಂದು ಕ್ಲಬ್ ಅಧ್ಯಕ್ಷ ಸುರೇಶ್ ಪಿ, ಕಾರ್ಯದರ್ಶಿ ಸೆನೋರಿಟಾ ಆನಂದ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here