ವೈಷ್ಣವಿ ನಾಟ್ಯಾಲಯದ ವಿದ್ಯಾರ್ಥಿಗಳಿಂದ ಭರತನಾಟ್ಯ ಕಾರ್ಯಕ್ರಮ

0

ಪುತ್ತೂರು: ಶ್ರೀ ದೇವತಾ ಸಮಿತಿಯ ಆಶ್ರಯದಲ್ಲಿ ಕಿಲ್ಲೆ ಮೈದಾನದಲ್ಲಿ ನಡೆದ ಗಣೇಶೋತ್ಸವದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮದ ಪ್ರಥಮ ದಿನದಲ್ಲಿ ವಿದುಷಿ ಯೋಗೀಶ್ವರಿ ಜಯಪ್ರಕಾಶ್ ರವರ ವೈಷ್ಣವಿ ನಾಟ್ಯಾಲಯದ ವಿದ್ಯಾರ್ಥಿಗಳಿಂದ ಭರತನಾಟ್ಯ ಕಾರ್ಯಕ್ರಮ ಜರಗಿತು.

ಹಾಡುಗಾರಿಕೆಯಲ್ಲಿ ವಿದ್ವಾನ್ ವೆಳ್ಳಿಕ್ಕೋತ್ ವಿಷ್ಣು ಭಟ್ ಮತ್ತು ವಸಂತ ಕುಮಾರ್ ಗೋಸಾಡ ಮೃದಂಗದಲ್ಲಿ ಗಿತೇಶ್ ಕುಮಾರ್ ನೀಲೇಶ್ವರ ಹಾಗೂ
ಕೊಳಲಿನಲ್ಲಿ ರಾಜಗೋಪಾಲ್ ನೀಲೇಶ್ವರ ಸಹಕರಿಸಿದರು. ನೃತ್ಯ ಗುರು ವಿದುಷಿ ಯೋಗೀಶ್ವರಿ ಜಯಪ್ರಕಾಶ್ ನಟುವಾಂಗ ಮತ್ತು ನೃತ್ಯ ನಿರ್ದೆಶನ ಮಾಡಿದ್ದಾರೆ.

LEAVE A REPLY

Please enter your comment!
Please enter your name here