ವಜ್ರಮಾತ ಮಹಿಳಾ ಭಜನಾ ಮಂಡಳಿ ವತಿಯಿಂದ ಓಣಂ ಆಚರಣೆ

0

ಪುತ್ತೂರು: ಒಡಿಯೂರು ವಜ್ರಮಾತ ಮಹಿಳಾ ಭಜನಾ ಮಂಡಳಿ ಪುತ್ತೂರು ಘಟಕ ವತಿಯಿಂದ ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಪುತ್ತೂರು ಹಾಗೂ ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಸಹಕಾರದೊಂದಿಗೆ ಮಹಾಲಿಂಗೇಶ್ವರ ದೇವಸ್ಥಾನದ ಸಭಾ ಭವನದಲ್ಲಿ ಓಣಂ ದಿನಾಚರಣೆಯನ್ನು ಆಚರಿಸಲಾಯಿತು.


ಗುರುದೇವ ಸೇವಾ ಬಳಗದ ಕಾರ್ಯದರ್ಶಿ ಹರಿಣಾಕ್ಷಿ ಜೆ ಶೆಟ್ಟಿ, ಶಾರದಾ ಅರಸ್, ಮಹಿಳಾ ಒಕ್ಕೂಟದ ಕಾರ್ಯದರ್ಶಿ ಪೂರ್ಣಿಮಾ ಶೆಟ್ಟಿ, ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಅಧ್ಯಕ್ಷೆ ವೇದಾವತಿ ರಾಜೇಶ್, ಕಾರ್ಯದರ್ಶಿ ವತ್ಸಲಾ ಶೆಟ್ಟಿ, ವಜ್ರಮಾತ ಸದಸ್ಯರು ಉಪಸ್ಥಿತರಿದ್ದರು. ವಜ್ರಮಾತ ಅಧ್ಯಕ್ಷೆ ನಯನ ರೈ ಸ್ವಾಗತಿಸಿ, ಕಾರ್ಯದರ್ಶಿ ಶಾರದಾ ಕೇಶವ್ ವಂದಿಸಿದರು, ಕೋಶಾಧಿಕಾರಿ ಯಮುನಾ, ಕವಿತಾ ದಿನಕರ್, ರೋಹಿಣಿ ರಾಘವ ಆಚಾರ್ಯ, ವತ್ಸಲ ನಾಯಕ್, ಪುಷ್ಪ ಹಾಗೂ ಇತರರು ಸಹಕರಿಸಿದರು.

LEAVE A REPLY

Please enter your comment!
Please enter your name here