ಪಾಣಾಜೆ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ತಾಲೂಕಿನಲ್ಲಿ ಪ್ರಥಮ ಸ್ಥಾನ

0

ನಿಡ್ಪಳ್ಳಿ; ಪಾಣಾಜೆ ಹಾಲು ಉತ್ಪಾದಕರ ಸಹಕಾರ ಸಂಘವು 2023-24 ನೇ ಸಾಲಿನಲ್ಲಿ ಪುತ್ತೂರು ತಾಲೂಕಿನ ಉತ್ತಮ ಸಂಘ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.

ಸೆ.18 ರಂದು ಮಂಗಳೂರಿನಲ್ಲಿ ನಡೆದ   ದ.ಕ.ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಇದರ 38 ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಒಕ್ಕೂಟದ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕ ವಿವೇಕ. ಡಿ ಮತ್ತು ನಿರ್ದೇಶಕರು ಈ ಪ್ರಶಸ್ತಿ ನೀಡಿ ಅಭಿನಂದಿಸಿದರು.

 ಪಾಣಾಜೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರೂ ದ.ಕ ಹಾಲು ಒಕ್ಕೂಟದ ನಿರ್ದೇಶಕರೂ ಆದ ನಾರಾಯಣ ಪ್ರಕಾಶ್ ನೆಲ್ಲಿತ್ತಿಮಾರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯನಾರಾಯಣ ಅಡಿಗ.ಎ ಈ ಪ್ರಶಸ್ತಿಯನ್ನು ಸ್ವೀಕರಿಸಿದರು.

LEAVE A REPLY

Please enter your comment!
Please enter your name here