ಬೆಟ್ಟಂಪಾಡಿ: ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾಸಂಘದಿಂದ ಬೆಟ್ಟಂಪಾಡಿ ದೇವಾಲಯಕ್ಕೆ ದೇಣಿಗೆ ಹಸ್ತಾಂತರ

0

ಬೆಟ್ಟಂಪಾಡಿ: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾಸಂಘದ ವತಿಯಿಂದ ರೂ. 25,005 ನ್ನು ಇತ್ತೀಚೆಗೆ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಅಭಿವೃದ್ಧಿ ಸಮಿತಿ ಗೆ ಹಸ್ತಾಂತರಿಸಲಾಯಿತು.


ದೇವಳದ ಅನುವಂಶಿಕ ಆಡಳಿತ ಮೊಕ್ತೇಸರ ವಿನೋದ್ ಕುಮಾರ್ ಬಲ್ಲಾಳ್, ಅಭಿವೃದ್ಧಿ ಸಮಿತಿ ಕಾರ್ಯದರ್ಶಿ ವಸಂತಕೃಷ್ಣ ಕೋನಡ್ಕರವರಿಗೆ ದೇಣಿಗೆ ಹಸ್ತಾಂತರಿಸಲಾಯಿತು. ಯಕ್ಷಗಾನ ಕಲಾಸಂಘದ ಅಧ್ಯಕ್ಷ ಐ.ಗೋಪಾಲಕೃಷ್ಣ ರಾವ್, ಗೌರವಾಧ್ಯಕ್ಷ ಸಂಜೀವ ರೈ ಎನ್., ಗೌರವಸಲಹೆಗಾರರಾದ ಸುಂದರ ಶೆಟ್ಟಿ ಬೆಟ್ಟಂಪಾಡಿ, ಸುಬ್ಬಣ್ಣ ಗೌಡ ಪಾರ, ಬಿ. ವಿಷ್ಣುರಾವ್, ಪ್ರಧಾನ ಕಾರ್ಯದರ್ಶಿ ಪ್ರದೀಪ ರೈ ಕೆ., ಕೋಶಾಧಿಕಾರಿ ಶ್ಯಾಂಪ್ರಸಾದ್ ಎಂ. , ಸದಸ್ಯರಾದ ದಾಮೋದರ ಮಾಲಡ್ಕ, ನರಸಿಂಹ ಸಿ.ಕೆ. ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here