ಸುಳ್ಯಪದವು: ಶಬರಿನಗರ ಸ್ವಾಮಿ ಕೊರಗಜ್ಜ ಕ್ಷೇತ್ರಕ್ಕೆ ಕೊಡುಗೆ

0

ಬಡಗನ್ನೂರು: ಸುಳ್ಯಪದವು ಶಬರಿನಗರ ಸ್ವಾಮಿ ಕೊರಗಜ್ಜ ಕ್ಷೇತ್ರದ ನೂತನ ಸಭಾಂಗಣಕ್ಕೆ ಸುಳ್ಯಪದವು ಜಾಗೃತ ಹಿಂದು ಜಾಗರಣ ಸಮಿತಿ ವತಿಯಿಂದ ನಾಲ್ಕು ಫ್ಯಾನ್ ಹಾಗೂ ಸುಳ್ಯಪದವು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ಸುಮಾರು 65 ಅಂದಾಜು ವೆಚ್ಚದಲ್ಲಿ  ಸಭಾಂಗಣಕ್ಕೆ ಸೌಂಡ್ ಸಿಸ್ಟಮ್ ಕೊಡುಗೆಯಾಗಿ ನೀಡಿದ್ದ ಹಿನ್ನೆಲೆಯಲ್ಲಿ ಬಿಲ್ಲವ ಸಮಿತಿ ಗೌರವಾಧ್ಯಕ್ಷ ಗಿರೀಶ್ ಕನ್ನಡ್ಕ, ಹಿಂದೂ ಜಾಗರಣ ಸಮಿತಿ ಗೌರವಾಧ್ಯಕ್ಷ ಗೋಪಾಲ ನಾಯಕ್ ಇಂದಾಜೆ ಅವರನ್ನು ಕೊರಗಜ್ಜ ಸೇವಾ ಸಮಿತಿ ಅಧ್ಯಕ್ಷ ಬೆಳಿಯಪ್ಪ ಗೌಡ ಶಬರಿನಗರ,  ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಮರದಮೂಲೆ  ಸಾಲು, ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಸದಾನಂದ ಬೋಳಂಕೂಡ್ಲು, ಕೋಶಾಧಿಕಾರಿ ಭಾಸ್ಕರ ಹೆಗ್ಗಡೆ ಶಬರಿನಗರ, ಪ್ರಧಾನ ಪೂಜಾ ಕರ್ಮಿ ಮಾದವ ಸಾಲಿಯಾನ್ ಜಾ.ಹಿ.ಜಾಗಾರಣ ಸಮಿತಿ ಅಧ್ಯಕ್ಷ ಅಶೋಕ್ ಪಿ.ಎಸ್, ಪ್ರಧಾನ ಕಾರ್ಯದರ್ಶಿ ಸುಧೀರ್ ಶಬರಿನಗರ ಹಾಗೂ ವಿವಿಧ ಸಮಿತಿ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here