ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡ ಪ್ರಿಯದರ್ಶಿನಿಯ ಧನ್ವಿ-ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಸ್ವಾಗತ

0

ಬೆಟ್ಟಂಪಾಡಿ: ಆಂಧ್ರಪ್ರದೇಶದ ಗುಂಟ್ಟೂರು ಜಿಲ್ಲೆಯ ವಿಜಯವಾಡದ ವಿಜ್ಞಾನ ಭಾರತಿ ಶಾಲೆಯಲ್ಲಿ ನಡೆದ ದಕ್ಷಿಣ ಮಧ್ಯ ಕ್ಷೇತ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಧನ್ವಿ ಎ.ಎಂ 600 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಹಾಗೂ 4*100 ಮೀಟರ್ ರಿಲೇಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ.

ಇವರ ಈ ಸಾಧನೆಯನ್ನು ಪ್ರಶಂಸಿದ ಶಾಲಾ ಆಡಳಿತ ಮಂಡಳಿಯವರು ಶಿಕ್ಷಕರು ಪೋಷಕರು ವಿದ್ಯಾರ್ಥಿಗಳು ಸೇರಿದಂತೆ ಈಕೆ ಹಾಗೂ ಇವಳ ಪೋಷಕರಾದ ಮೋಹನ ಚಂದ್ರ ಹಾಗೂ ಉಷಾ ಮತ್ತು ತರಬೇತುಗೊಳಿಸಿದ ದೈಹಿಕ ಶಿಕ್ಷಣ ಶಿಕ್ಷಕಿ ಮಮತಾ ಇವರನ್ನು ರೆಂಜ ಶ್ರೀರಾಮನಗರ ಶ್ರೀ ಅಯ್ಯಪ್ಪ ಭಜನಾ ಮಂದಿರದಿಂದ ಪ್ರಿಯದರ್ಶಿನಿ ವಿದ್ಯಾಸಂಸ್ಥೆಯವರೆಗೆ ತೆರೆದ ವಾಹನದಲ್ಲಿ ಸಿಂಗಾರಿ ಮೇಳದೊಂದಿಗೆ ಮೆರವಣಿಗೆ ಮೂಲಕ ಸೆ. 17 ರಂದು ಸ್ವಾಗತಿಸಲಾಯಿತು.

LEAVE A REPLY

Please enter your comment!
Please enter your name here