ಕಾಣಿಯೂರಿನಲ್ಲಿ ಬಿಜೆಪಿಯ ಕುಟ್ರುಪ್ಪಾಡಿ ಮಹಾಶಕ್ತಿಕೇಂದ್ರ ಸಭೆ- ಸದಸ್ಯತ್ವ ಅಭಿಯಾನ

0

ಕಾಣಿಯೂರು; ಬಿಜೆಪಿ ಸದಸ್ಯತ್ವ ಅಭಿಯಾನ ಹಾಗೂ ಬಿಜೆಪಿ ಸೇವಾ ಪಾಕ್ಷಿಕದ ಪ್ರಯುಕ್ತ ಸುಳ್ಯ ಮಂಡಲದ ಕುಟ್ರುಪ್ಪಾಡಿ ಮಹಾಶಕ್ತಿಕೇಂದ್ರ ಪ್ರಮುಖರ ಸಭೆ ಸುರೇಶ್ ಇವರ ಅಧ್ಯಕ್ಷತೆಯಲ್ಲಿ ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಿತು.


ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ ಹಾಗೂ ಕುಟ್ರುಪಾಡಿ ಮಹಾ ಶಕ್ತಿ ಕೇಂದ್ರದ ಬಿಜೆಪಿ ಸದಸ್ಯತ್ವದ ಪ್ರಭಾರಿ ರಾಧಾಕೃಷ್ಣ ಬೂಡಿಯಾರ್ ಸಭೆಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಕಾರ್ಯದರ್ಶಿ ಗಣೇಶ್ ಕೆ ಎಸ್ ಉದನಡ್ಕ, ಮಹಿಳಾ ಮೋರ್ಚಾ ಅಧ್ಯಕ್ಷೆ ಬಿ.ಕೆ. ಇಂದಿರಾ, ಎಸ್ ಟಿ ಮೋರ್ಚಾದ ಅಧ್ಯಕ್ಷ ಗಂಗಾಧರ, ಮಹಾ ಶಕ್ತಿ ಕೇಂದ್ರದ ಕಾರ್ಯದರ್ಶಿ ಜಯಪ್ರಕಾಶ್, ಮಂಡಲ ಸಮಿತಿಯ ಸದಸ್ಯರಾದ ತಾರಾನಾಥ್, ಧನಂಜಯ ಕೇನಾಜೆ, ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸಿ ಎ ಬ್ಯಾಂಕಿನ ಅಧ್ಯಕ್ಷರು, ಉಪಾಧ್ಯಕ್ಷರು, ಬೂತ್ ಸಮಿತಿಯ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here