ಪುತ್ತೂರಿನ ಎವಿಜಿ ಶಾಲೆಗೆ ಬೆಂಗಳೂರು ಡಿಡಿಪಿಐ ಲೋಕೇಶ್.ಸಿ ಭೇಟಿ

0

ಪುತ್ತೂರು: ಪುತ್ತೂರಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದು ಇದೀಗ ಬೆಂಗಳೂರಿನಲ್ಲಿ ಉಪನಿರ್ದೇಶಕರಾಗಿ ಪದೋನ್ನತಿ ಹೊಂದಿರುವ ಲೋಕೇಶ್ ಸಿ ಅವರು ಸೆ.19ರಂದು ಬನ್ನೂರು ಕೃಷ್ಣ ನಗರದಲ್ಲಿರುವ ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಗೆ ಭೇಟಿ ನೀಡಿದರು.


ಶಾಲೆಯ ತರಗತಿ ಕೊಠಡಿಗಳನ್ನು, ಕಂಪ್ಯೂಟರ್ ಕೊಠಡಿಯನ್ನು ಹಾಗೂ ಕಚೇರಿಯನ್ನು ವೀಕ್ಷಿಸಿದ ಅವರು ಶಾಲಾ ಪರಿಸರ ಹಾಗೂ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದುಕೊಂಡು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಶಾಲೆಯ ವತಿಯಿಂದ ಅವರನ್ನು ಹಾಗೂ ಅವರ ಜೊತೆ ಬಂದಿದ್ದ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಅವರ ಕಚೇರಿಯ ಶಿಕ್ಷಣ ಸಂಯೋಜಕ ಹರಿಪ್ರಸಾದ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ವಹಿಸಿದರು. ಸಂಸ್ಥೆಯ ಆಡಳಿತ ಮಂಡಳಿಯ ಕಾರ್ಯದರ್ಶಿ ಗುಡ್ಡಪ್ಪ ಗೌಡ ಬಲ್ಯ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಆಡಳಿತ ಮಂಡಳಿಯ ಉಪಾಧ್ಯಕ್ಷ ಉಮೇಶ್ ಮಳುವೇಲು ಮತ್ತು ನಿರ್ದೇಶಕ ಸೀತಾರಾಮ ಕೆ ಅವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ನಿರ್ದೇಶಕರುಗಳಾದ ಪುಷ್ಪಾವತಿ ಕಳುವಾಜೆ, ಗಂಗಾಧರ ಗೌಡ, ಪ್ರತಿಭಾ ದೇವಿ, ವನಿತಾ ಮುಂತಾದವರು ಉಪಸ್ಥಿತರಿದ್ದರು. ಶಾಲಾ ಸಂಚಾಲಕರಾದ ಎ.ವಿ.ನಾರಾಯಣ ಅವರು ವಂದಿಸಿದರು.

LEAVE A REPLY

Please enter your comment!
Please enter your name here