ಪುರುಷರಕಟ್ಟೆಯಲ್ಲಿ ಕಾರು-ಸ್ಕೂಟರ್ ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಹೋಳಿಗೆ ವ್ಯಾಪಾರಿ ಗಣೇಶ್ ಪ್ರಭು ನಿಧನ

0

ಪುತ್ತೂರು: ಪುರುಷರಕಟ್ಟೆ ದಾಬೋಲಿ ಶ್ರೀ ಗುರುಪೂರ್ಣಮಂದಿರದ ಎಂಬಲ್ಲಿ ಸೆ.21ರಂದು ರಾತ್ರಿ ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಹೋಳಿಗೆ ವ್ಯಾಪಾರಿ ಗಣೇಶ್ ಪ್ರಭು ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. .

ಬಂಟ್ವಾಳ ತಾಲೂಕಿನ ಪಂಜಳ ನಿವಾಸಿ ಹೋಳಿಗೆ ವ್ಯಾಪಾರಿ ಗಣೇಶ್ ಪ್ರಭು ಮೃತ ದುರ್ದೈವಿ. ಅವರು ಪುತ್ತೂರು ಪುರುಷರಕಟ್ಟೆಯಲ್ಲಿನ ಉದಯಭಾಗ್ಯ ಹೊಟೇಲ್‌ನಲ್ಲಿ ಹಿಂದೆ ಕೆಲಸ ನಿರ್ವಹಿಸುತ್ತಿದ್ದು ಬಳಿಕ ಹೋಳಿಗೆ ವ್ಯಾಪಾರ ನಡೆಸುತ್ತಿದ್ದರು.

ಸೆ.21 ರಂದು ಹೋಳಿಗೆ ಕೊಂಡೊಯ್ಯಲೆಂದು ಉದಯಭಾಗ್ಯ ಹೊಟೇಲ್‌ಗೆ ಸ್ಕೂಟರ್ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಪುರುಷರಕಟ್ಟೆ ದಾಮೋಲಿ ಶ್ರೀ ಗುರುಪೂರ್ಣಮಂದಿರ ಬಳಿ ವಿರುದ್ಧ ಧಿಕ್ಕಿನಿಂದ ಬರುತ್ತಿದ್ದ ಕಾರು ನಡುವೆ ಅಪಘಾತ ಸಂಭವಿಸಿದೆ.

ಅಪಘಾತದ ರಭಸಕ್ಕೆ ತೀವ್ರವಾಗಿ ಗಾಯಗೊಂಡಿದ್ದ ಗಣೇಶ್ ಪ್ರಭು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಕೆ.ಎಂ.ಸಿ ಅಸ್ಪತ್ರೆಗೆ ಕರೆದೊಯ್ಯಲಾಗಿಲಾಗಿತ್ತು, ಆದರೆ ಅಲ್ಲಿ ಗಣೇಶ್ ಪ್ರಭು ಅವರು ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.. ಸ್ಥಳಕ್ಕೆ ಪುತ್ತೂರು ಸಂಚಾರ ಪೊಲೀಸರು ಆಗಮಿಸಿ ಮಾಹಿತಿ ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here