ಕುಂಬ್ರ ಸ್ನೇಹ ಸಾಗರ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆ

0

ಗೌರವಾಧ್ಯಕ್ಷರಾಗಿ ಅಬ್ದುಲ್ ರಹಿಮಾನ್ ಹಾಜಿ, ಅಧ್ಯಕ್ಷರಾಗಿ ಅಶ್ರಫ್ ಸಾರೆಪುಣಿ, ಪ್ರ.ಕಾರ್ಯದರ್ಶಿಯಾಗಿ ಉದಯ ಮಡಿವಾಳ

ಪುತ್ತೂರು: ಸ್ನೇಹ ಸಾಗರ ರಿಕ್ಷಾ ಚಾಲಕ ಮಾಲಕರ ಸಂಘ ವಾರ್ಷಿಕ ಮಹಾಸಭೆ ಕುಂಬ್ರ ರೈತ ಸಭಾಭವನದಲ್ಲಿ ಪಿ.ಎಂ ಅಬ್ದುಲ್ ರಹಿಮಾನ್ ಹಾಜಿ ಅರಿಯಡ್ಕ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ 2023-24ನೇ ಸಾಲಿನ ಲೆಕ್ಕ ಪತ್ರವನ್ನು ಕಾರ್ಯದರ್ಶಿ ಸತೀಶ್ ಡಿ ಮಂಡಿಸಿದರು. ನಂತರ 2024-25ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.


ಗೌರವಾಧ್ಯಕ್ಸರಾಗಿ ಪಿ.ಎಂ ಅಬ್ದುಲ್ ರಹಿಮಾನ್ ಹಾಜಿ ಅರಿಯಡ್ಕ ಪುನರಾಯ್ಕೆಗೊಂಡರು. ಅಧ್ಯಕ್ಷರಾಗಿ ಅಶ್ರಫ್ ಸಾರೆಪುಣಿ ಪ್ರಧಾನ ಕಾರ್ಯದರ್ಶಿಯಾಗಿ ಉದಯ ಮಡಿವಾಳ ಹಾಗೂ ಕೋಶಾಧಿಕಾರಿಯಾಗಿ ಶ್ರೀನಿವಾಸ ಮುಡಾಲ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಸುಧಾಕರ ಪಾಟಾಳಿ, ಜೊತೆ ಕಾರ್ಯದರ್ಶಿಗಳಾಗಿ ಶಂಸುದ್ದಿನ್ ಗಟ್ಟಮನೆ, ಹಸೈನಾರ್ ಜಾರತ್ತಾರ್ ಆಯ್ಕೆಯಾದರು. ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಸುಂದರ ಗೌಡ, ಲೋಕೇಶ್ ರೈ ಅಮೈ, ತಾಜುದ್ದೀನ್ ಸಾರೆಪುಣಿ, ಬಶೀರ್ ಕಡ್ತಿಮಾರ್, ಸತೀಶ್ ಡಿ ಅವರನ್ನು ಆಯ್ಕೆ ಮಾಡಲಾಯಿತು. ನೂತನ ಕಾರ್ಯದರ್ಶಿ ಉದಯ ಮಡಿವಾಳ ವಂದಿಸಿದರು.

LEAVE A REPLY

Please enter your comment!
Please enter your name here