ಆಲಂಕಾರು ಬಿ.ಜೆ.ಪಿ ಶಕ್ತಿ ಕೇಂದ್ರ ವತಿಯಿಂದ ಆಲಂಕಾರಿನಲ್ಲಿ ಪಂಡಿತ್ ದೀನದಯಾಳು ಉಪಾಧ್ಯಯರ ಜನ್ಮದಿನಾಚರಣೆ

0

ಆಲಂಕಾರು: ಪಂಡಿತ್ ದೀನದಯಾಳು ಉಪಾಧ್ಯಾಯರವರ ಜನ್ಮದಿನಾಚರಣೆಯನ್ನು ಬಿ.ಜೆ.ಪಿ ಶಕ್ತಿಕೇಂದ್ರದ ಪ್ರಮುಖ ಜಯಕರ ಪೂಜಾರಿ ಕಲ್ಲೇರಿಯವರ ಮನೆಯಲ್ಲಿ ಆಚರಿಸಲಾಯಿತು. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಭಾಗವಹಿಸಿ ಪಂಡಿತ್ ದೀನದಯಾಳು ರವರ ಜೀವನ ಚರಿತ್ರೆಯ ಬಗ್ಗೆ ತಿಳಿಸಿ ಬಿ.ಜೆ.ಪಿ ಬೆಳೆದು ಬಂದ ರೀತಿಯನ್ನು ಕಾರ್ಯಕರ್ತರಿಗೆ ತಿಳಿಸಿದರು.


ಈ ಸಂಧರ್ಭದಲ್ಲಿ ಹಿರಿಯರಾದ ಈಶ್ವರ ಭಟ್ ಕೊಂಡಾಡಿ,ಆಲಂಕಾರು ಶಕ್ತಿ ಕೇಂದ್ರ ಪ್ರಮುಖ್ ಜಯಕರ ಪೂಜಾರಿ ಕಲ್ಲೆರಿ, ಬೂತ್ ಸಮಿತಿ ಅಧ್ಯಕ್ಷ ಶೀನಪ್ಪ ಕುಂಬಾರ,ಕೊಯಿಲ ಬೂತ್ ಸಮಿತಿ ಅಧ್ಯಕ್ಷ ವಸಂತ ಕುಮಾರ್, ಅಲಂಕಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಶೀಲ ,ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ದಾಮೋದರ ಗೌಡ ಕಕ್ವೆ, ಅಲಂಕಾರು ಸಿ.ಎ ಬ್ಯಾಂಕ್ ನಿರ್ದೇಶಕರಾದ ಸುಧಾಕರ ಪೂಜಾರಿ ಕಲ್ಲೇರಿ,ಸುಳ್ಯ ಮಂಡಲ ಒಬಿಸಿ ಮೊರ್ಚಾ ಪ್ರಧಾನ ಕಾರ್ಯದರ್ಶಿ ಸದಾನಂದ ಆಚಾರ್ಯ,ಯುವಮೊರ್ಚಾ ಪ್ರಧಾನ ಕಾರ್ಯದರ್ಶಿ ಆರ್ ದಿವಾಕರ ಕುಂಬಾರ,ಮಂಡಲ ಸಮಿತಿ ಸದಸ್ಯ ದಯಾನಂದ ಗೌಡ ಆಲಡ್ಕ, ಗ್ರಾ.ಪಂ ಸದಸ್ಯರಾದ ಶಾರದಾ, ಶ್ವೇತ ಕುಮಾರ್ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.ಸುಳ್ಯಮಂಡಲ ಬಿ.ಜೆ.ಪಿ ಪ್ರದಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ ಸ್ವಾಗತಿಸಿ, ವಂದಿಸಿದರು.


ಆಲಂಕಾರು ಗ್ರಾಮದ ಕೊಂಡಾಡಿ ಕೊಪ್ಪ ಸರಕಾರಿ ಶಾಲೆಯಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಮೋಹನ ಕಮ್ಮಿತ್ತಿಲು ರವರು ಇತ್ತೀಚೆಗೆ ನಿಧನರಾಗಿದ್ದು ಅವರ ಮನೆಗೆ ಶಾಸಕರು ಭೇಟಿ ನೀಡಿ ಸಾಂತ್ವನ ತಿಳಿಸಿ,ಬಳಿಕ ಆಲಂಕಾರು ಗ್ರಾಮದ ಶರವೂರು ಪಜಡ್ಕದ ಶೇಖರ ಗೌಡ ರವರು ಅನಾರೋಗ್ಯದಿಂದ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು
ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

LEAVE A REPLY

Please enter your comment!
Please enter your name here