ಉಪ್ಪಿನಂಗಡಿ: ನಿನ್ನಿಕಲ್ ನಿವಾಸಿ ಖಾಸಿಂ ನಿಧನ

0

ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ ನಿವಾಸಿ, ಕುಂಞ್ ಬ್ಯಾರಿಯವರ ಪುತ್ರ ಖಾಸಿಂ (53 ವ.) ಸೆ. 25ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಖಾಸಿಂರವರಿಗೆ ಸೆ. 22ರಂದು ಮೆದುಲಿನಲ್ಲಿ ರಕ್ತಸ್ರಾವ ಉಂಟಾಗಿ, ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನ ಹೊಂದಿದ್ದಾರೆ.

ಖಾಸಿಂರವರು ಕಳೆದ ಸುಮಾರು 15 ವರ್ಷಗಳಿಂದ ಉಪ್ಪಿನಂಗಡಿ ಮಾಲಿಕ್ ದೀನಾರ್ ಜುಮಾ ಮಸೀದಿಯಲ್ಲಿ ಸಹಾಯಕ ಸಿಬ್ಬಂದಿಯಾಗಿ ಸೇವೆ ಸಲ್ಲಿಸುತ್ತಿದ್ದು, ಚಿರಪರಿಚಿತರಾಗಿದ್ದರು.
ಮೃತರು ಪತ್ನಿ, 2 ಗಂಡು, 2 ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here