ಸವಣೂರು : ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ

0

ಸವಣೂರು: ಬಿಜೆಪಿ ಸುಳ್ಯ ಮಂಡಲ ಸವಣೂರು ಶಕ್ತಿಕೇಂದ್ರ ಹಾಗೂ ಬೂತ್ ಸಮಿತಿ 66-ಮೊಗರು ಮತ್ತು ಬೂತ್ ಸಮಿತಿ-65 ಸವಣೂರು ಇವುಗಳ ಜಂಟಿ ಆಶ್ರಯದಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಯರ ಜನ್ಮದಿನಾಚರಣೆ ಕಾರ್ಯಕ್ರಮವು ಸವಣೂರು ಯುವಕ ಮಂಡಲದ ಯುವ ಸಭಾಭವನದಲ್ಲಿ ಜರಗಿತು.

ಇದರ ಅಂಗವಾಗಿ ಹಣ್ಣಿನ ಗಿಡ ನೆಡುವುದರ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ಸಂಧರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಎಸ್.ಟಿ. ಮೋರ್ಚಾದ ಅಧ್ಯಕ್ಷರಾದ ಗಂಗಾಧರ ಪೆರಿಯಡ್ಕ, ಸುಳ್ಯ ಮಂಡಲ ಸದಸ್ಯರಾದ ತಾರಾನಾಥ ಕಾಯರ್ಗ, ಸವಣೂರು ಶಕ್ತಿ ಕೇಂದ್ರದ ಅಧ್ಯಕ್ಷರಾದ ಚೇತನ್ ಕುಮಾರ್ ಕೊಡಿಬೈಲ್, ರೈತ ಉತ್ಪಾಧಕರ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀಧರ ಸುಣ್ಣಾಜೆ, ಬೂತ್ ಸಮಿತಿ 65 ರ ಕಾರ್ಯದರ್ಶಿ ಸತೀಶ್ ಬಲ್ಯಾಯ, ಬೂತ್ ಸಮಿತಿ 66 ರ ಅಧ್ಯಕ್ಷರಾದ ರಾಜೇಶ್ ಇಡ್ಯಾಡಿ, ಸಾಮಾಜಿಕ ಮುಂದಾಳು ರಾಮಕೃಷ್ಣ ಪ್ರಭು, ಸವಣೂರು ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕರಾದ ಗಂಗಾಧರ ಸುಣ್ಣಾಜೆ, ಪ್ರೇಮಚಂದ್ರ ಮೆದು, ಕಾರ್ಯಕರ್ತರಾದ ಮಿಥುನ್ ಅಗರಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here