ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯ ಭುವನ್ ಕರಂದ್ಲಾಜೆ ಕರಾಟೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

0

ನರಿಮೊಗರು: ದ.ಕ.ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ದ.ಕ.ಜಿಲ್ಲೆ, ಮಂಗಳೂರು ಪ್ರಾಥಮಿಕ ಪ್ರೌಢಶಾಲಾ ವಿದ್ಯಾರ್ಥಿಗಳ ಆಟೋಟ ಸ್ಪರ್ಧೆ 2024-25 ಇದರ ವತಿಯಿಂದ ಎಸ್ ಡಿಯಂ ಮಂಗಳ ಜ್ಯೋತಿ ಸಮಗ್ರ ಶಾಲೆ ಮಂಗಳೂರು ಇಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿರುವ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಾದ
ಅಜಯ್ ಕೃಷ್ಣ, ತುಷಾರ್, ಅಭೀಶ್ ರೈ ಪೃಥ್ವಿ ಕೃಷ್ಣ ,ಧನ್ವಿನ್ ಇವರುಗಳು ತೃತೀಯ ಸ್ಥಾನ ಹಾಗೂ ಭುವನ್ ಕರಂದ್ಲಾಜೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರಿಗೆ ಕರಾಟೆ ಶಿಕ್ಷಕರಾದ ನಾರಾಯಣ ಆಚಾರ್ಯ ಮಳಿ ತರಬೇತಿ ನೀಡಿದ್ದು, ಶಾಲಾ ಸಂಚಾಲಕರಾದ ಭಾಸ್ಕರ್ ಆಚಾರ್ ಹಿಂದಾರ್ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಜಯಮಾಲಾ ವಿ ಎನ್ ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here