ಪುತ್ತೂರು ತಾಲೂಕು ಮಟ್ಟದ ಪಿಯುಸಿ ವಿಭಾಗದ ಖೋ ಖೋ ಪಂದ್ಯಾಟ ಉದ್ಘಾಟನೆ

0

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ(ಪ.ಪೂ) ದ.ಕ ಜಿಲ್ಲೆ ಹಾಗೂ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಮುಕ್ರಂಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಬಾಲಕ-ಬಾಲಕಿಯರ ಬೊ ಖೋ ಪಂದ್ಯಾಟವು ವಿವೇಕಾನಂದ ಪದವಿ ಪೂರ್ವ ಕಾಲೇಜು ನೆಹರು ನಗರದಲ್ಲಿ ನಡೆಯಿತು.

ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಮುಕ್ರಂಪಾಡಿ ಇದರ ಪ್ರಾಂಶುಪಾಲೆ ಪ್ರಮೀಳ ಜೆಸ್ಸಿ ಕ್ರಾಸ್ತಾ, ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷೆ ಮಲ್ಲಿಕ ಜೆ ರೈ, ಸದಸ್ಯರಾದ ಚಂದ್ರಕಾಂತ್ ನಾಯಕ್ ಮತ್ತು ಬಾಲಕೃಷ್ಣ.ಯಂ, ವಿವೇಕಾನಂದ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ಹಾಗೂ ದೈಹಿಕ ಶಿಕ್ಷಣ ಉಪನ್ಯಾಸಕಿ ಜ್ಯೋತಿ ಇವರು ಉಪಸ್ಥಿತರಿದ್ದರು.

ಬಾಲಕರ ವಿಭಾಗದಲ್ಲಿ ವಿವೇಕಾನಂದ ಪ.ಪೂ ಕಾಲೇಜು ವಿಜೇತರಾದರೆ, ಬಾಲಕಿಯರ ವಿಭಾಗದಲ್ಲಿ ಸರಕಾರಿ ಪ.ಪೂ.ಕಾಲೇಜು ಕೊಂಬೆಟ್ಟು ವಿಜೇತರಾದರು. ಹಾಗೆಯೇ, ಸರಕಾರಿ ಪ.ಪೂ ಕಾಲೇಜು ಕೊಂಬೆಟ್ಟು ಬಾಲಕರು ಮತ್ತು ವಿವೇಕಾನಂದ ಪ.ಪೂ ಕಾಲೇಜು ಬಾಲಕಿಯರು ದ್ವಿತೀಯ ಸ್ಥಾನ ಪಡೆದುಕೊಂಡರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ಬಾಲಕಿಯರ ಸರಕಾರಿ ಪ.ಪೂ.ಕಾಲೇಜಿನ ಕ್ರೀಡಾ ಸಂಯೋಜಕರಾದ ಚಿತ್ರಲೇಖ, ದಾಮೋದರ ಹಾಗೂ ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಶೋಭಾ ಕೆ ಕಾರ್ಯಕ್ರಮ ನಿರೂಪಿಸಿದರು. ಶ್ರೀ ದಾಮೋದರ ವಂದಿಸಿದರು.

LEAVE A REPLY

Please enter your comment!
Please enter your name here